ವೃತ್ತಿ ಸಮಾಲೋಚನೆ, ಮಾರ್ಗದರ್ಶನ: ನೇರ ಫೋನ್-ಇನ್ ಕಾರ್ಯಕ್ರಮ
Career Counseling, Guidance: Direct Phone-in Program
ಲೋಕದರ್ಶನ ವರದಿ
ವೃತ್ತಿ ಸಮಾಲೋಚನೆ, ಮಾರ್ಗದರ್ಶನ: ನೇರ ಫೋನ್-ಇನ್ ಕಾರ್ಯಕ್ರಮ
ಬೆಳಗಾವಿ 15: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ 14ರಂದು ವೃತ್ತಿ ಸಮಾಲೋಚನೆ ಮತ್ತು ಮಾರ್ಗದರ್ಶನ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೌಲ್ಯ ಮಾಪನ ಕುಲಸಚಿವರಾದ ಡಾ. ಟಿ. ಎನ್. ಶ್ರೀನಿವಾಸ ಹಾಗೂ ವಿಟಿಯು ಶೈಕ್ಷಣಿಕ ವಿಶೇಷ ಅಧಿಕಾರಿ ಪ್ರೋ. ಸದಾಶಿವ ಹಾಲಭಾವಿ ಅವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೌಲ್ಯ ಮಾಪನ ಕುಲಸಚಿವ ಡಾ. ಟಿ. ಎನ್. ಶ್ರೀನಿವಾಸ ಅವರು ವಿದ್ಯಾರ್ಥಿಗಳು ಅವರ ಆಸಕ್ತಿ ಹಾಗೂ ಸಾಮರ್ಥ್ಯಕ್ಕೆ ಅನುಸಾರವಾಗಿ ಕೋರ್ಸ್ಗಳ ಆಯ್ಕೆ ಮಾಡಿಕೊಳ್ಳಬೇಕು, ಪ್ರಸ್ತುತ ಮಾರುಕಟ್ಟೆಯಲ್ಲಿ ಯಾವ ಕೋರ್ಸ್ಗಳಿಗೆ ಹೆಚ್ಚು ಬೇಡಿಕೆ ಇದೆ, ಕೃತಕ ಬುದ್ಧಿ ಮತ್ತೆ (ಎಐ) ಕುರಿತು ಮತ್ತು 2025ರ ಸಿಇಟಿ ಪ್ರಕ್ರೀಯೆ ಕುರಿತು ಮಾಹಿತಿ ಹಂಚಿಕೊಂಡರು. ವಿಟಿಯು ಶೈಕ್ಷಣಿಕ ವಿಶೇಷ ಅಧಿಕಾರಿ ಪ್ರೋ. ಸದಾಶಿವ ಹಾಲಭಾವಿ ಅವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆಮಾಡಬೇಕಾದರೆ ಜ್ಞಾನ, ಕೌಶಲ್ಯ ಮತ್ತು ವರ್ತನೆಯನ್ನು ಚನ್ನಾಗಿ ಬೆಳಸಿಕೊಂಡರೆ ಖಂಡೀತ ಯಶಸ್ವಿಯಾಗುತ್ತಾರೆ ಎಂದರು ಹಾಗೂ ಕೇಳುಗಳ ಅನೇಕ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್ ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ವಿಶೇಷ ಅಧಿಕಾರಿ ಮತ್ತು ಸಿವಿಲ್ ಇಂಜೀನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ. ರೋಹನ ಗುರವ, ವೇಣುಧ್ವನಿ ಸಮುದಾಯ ಬಾನುಲಿ ಕೇಂದ್ರದ ನಿಲಯ ನಿರ್ವಾಹಕ ಡಾ. ವಿರೇಶಕುಮಾರ ನಂದಗಾಂವ, ಕಾರ್ಯಕ್ರಮ ಸಂಯೋಜಕ ಮಂಜುನಾಥ ಬಳ್ಳಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 