ಕಾಂಗ್ರೆಸ್ ನಾಯಕರ ವಿರುದ್ಧ ಮೊಕದ್ದಮೆ: ಸರ್ಕಾರದ ವಿರುದ್ಧ ಡಿ.ಕೆ.ಸುರೇಶ್ ಕಿಡಿ
ಬೆಂಗಳೂರು, ಜೂ 30: ನಿರಂತರವಾಗಿ ಇಂಧನ ದರ ಏರಿಕೆ ವಿರುದ್ಧ ಸೈಕಲ್ ಜಾಥಾ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ಮೇಲೆ ರಾಜ್ಯ ಬಿಜೆಪಿ ಸರ್ಕಾರ ಮೊಕದ್ದಮೆ ದಾಖಲಿಸಿರುವುದನ್ನು ಸಂಸದ ಡಿ.ಕೆ. ಸುರೇಶ್ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜನರಪರವಾಗಿ ಪ್ರತಿಭಟನೆ ಮಾಡಿದ್ದೇವೆ. ಬಿಜೆಪಿಯವರು ನಮ್ಮ ವಿರುದ್ಧ ಪ್ರಕರಣ ದಾಖಲಿಸಿರುವುದು ಗಮನಕ್ಕೆ ಬಂದಿದೆ. ಪೊಲೀಸರು ಕಾಂಗ್ರೆಸ್ ಮೇಲೆ ಮಾತ್ರ ಕೇಸ್ ದಾಖಲಿಸುತ್ತಾರೆಯೇ ವಿನಃ ನಿಯಮ ಉಲ್ಲಂಘಿಸಿದ ಬಿಜೆಪಿ ನಾಯಕರ ಮೇಲೆ ಯಾವ ಕ್ರಮವನ್ನೂ ಸಹ ಕೈಗೊಳ್ಳುವುದಿಲ್ಲ ಎಂದರು.
ಜನಪರ ಹೋರಾಟ ನಡೆಸಿದರೆ ಪ್ರಕರಣ ದಾಖಲಿಸುತ್ತಾರೆ ಎಂದರೆ ಏನರ್ಥ?. ಆದರೂ ನಮ್ಮ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಡಿ.ಕೆ. ಸುರೇಶ್ ಮಾರ್ಮಿಕವಾಗಿ ಹೇಳಿದರು.ಸಾರ್ವಜನಿಕರ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರುವುದು ಹೇಗೆ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದ ಅವರು, ಜನಪರ ಧ್ವನಿಗೆ ಪ್ರಕರಣ ದಾಖಲಿಸುವುದು ಸರಿಯಲ್ಲ. ಜನರ ಬಗ್ಗೆ ಕಾಳಜಿ ತೋರದ ಬಿಜೆಪಿಯಲ್ಲಿ ಸಚಿವರು ಪರಸ್ಪರ ಆರೋಪ ಪ್ರತ್ಯಾರೋಪ ದಾಳಿ ನಡೆಸುವುದು, ಮಾಧ್ಯಮಗಳ ಮೂಲಕ ಕಿತ್ತಾಡುವುದೇ ಅವರ ಕೆಲಸವಾಗಿದೆ ಎಂದು ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 