ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನ ಜಪ್ತಿಚಾಲಕನ ವಿರುದ್ಧ ಪ್ರಕರಣ ದಾಖಲು
Case registered against impounded tipper driver for illegally transporting sand
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನ ಜಪ್ತಿಚಾಲಕನ ವಿರುದ್ಧ ಪ್ರಕರಣ ದಾಖಲು
ರಾಣೇಬೆನ್ನೂರು 10: ಸಮೀಪದ ಗುತ್ತಲ ರಸ್ತೆ ಮೂಲಕ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದು, ಅದರ ಮಾಲೀಕ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುತ್ತಲ ಹೊಂಡದ ಬಳಿ ತಡರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿ, ವಾಹನಗಳ ತಪಾಸಣೆ ನಡೆಸುತ್ತಿದ್ದರು.
ಇದೇ ಮಾರ್ಗದಲ್ಲಿ ಬಂದಿದ್ದ ಟಿಪ್ಪರ್ ವಾಹನದಲ್ಲಿ (ಕೆಎ 68, 3171) ಮರಳು ಇರುವುದನ್ನು ಗಮನಿಸಿದ್ದರು. ವಾಹನ ತಡೆದು ಪರೀಶೀಲಿಸಿದಾಗ, ಪರ್ಮಿಟ್ ಇಲ್ಲದಿರುವುದು ಗೊತ್ತಾಗಿದೆ’ ಎಂದು ವ್ಯಾಕರಣ ದಾಖಲಿಸಿಕೊಂಡಿರುವ ಗುತ್ತಲ ಠಾಣಾ ಪೊಲೀಸರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆದು, ಟಿಪ್ಪರ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಇದರಿಂದ ಸರ್ಕಾರಕ್ಕೆ ಅಪಾರ ಪ್ರಮಾಣದ ಕಂದಾಯ ವಂಚಿಸಲಾಗುತ್ತಿತ್ತು. ಟಿಪ್ಪರ್ನಲ್ಲಿದ್ದ ಸುಮಾರು ? 12 ಸಾವಿರ ಮೌಲ್ಯದ ಮರಳು ಜಪ್ತಿ ಮಾಡಲಾಗಿದೆ. ಟಿಪ್ಪರ್ ಮಾಲೀಕ ಯತ್ತಿನಹಳ್ಳಿಯ ಬಸವರಾಜ ಗುಡ್ಡನಗೌಡ ಪಾಟೀಲ ಹಾಗೂ ಚಾಲಕ ಪರಶುರಾಮ ಬಾಳಿಕಾಯಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಚಾಲಕನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ’ ಎಂದು ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 