ಮನೆಯ ಕಿಟಕಿ ಮುರಿದು ನಗದು,ಚಿನ್ನಾಭರಣ ಕಳ್ಳತನ
Cash, jewellery stolen after house window broken
ಹೂವಿನಹಡಗಲಿ 21 : ದರೋಡೆಕೊರರು ಮನೆಯ ಹಿಂಭಾಗಲದ ಕಿಟಕಿ ಮುರಿದು ನಗದು, ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಪಟ್ಟಣದ ಸೋಗಿ ರಸ್ತೆಯ 9ನೇ ವಾರ್ಡ್ ನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಪಟ್ಟಣದ ಓಷಧಿ ಮಾರಾಟಗಾರ ಪ್ರತಿನಿಧಿ ಅಜಮಾತುಲ್ಲಾ ಎಂಬುವವರು ಮನೆ ಬೀಗ ಹಾಕಿಕೊಂಡು ಪಟ್ಟಣದ ಸಹೋದರಿ ಮನೆಗೆ ಹೋಗಿದ್ದ ವೇಳೆ ರಾತ್ರಿ ಕಳ್ಳರು ಮನೆಯ ಹಿಂಭಾಗದ ಕಿಟಕಿಯ 4 ಕಬ್ಬಿಣ ಸರಳನ್ನು ಕೊರೆದು ಮನೆ ಒಳಗಡೆ ಹೋಗಿ ಕಳ್ಳತನ ಮಾಡಿದ್ದಾರೆ. ಮನೆಯಲ್ಲಿದ್ದ 15 ತೊಲೆ ಬಂಗಾರ, ಜತೆಗೆ ಬೆಳ್ಳಿ , ? 65 ಸಾವಿರ ನಗದು ಹಣವನ್ನು ದೋಚಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ದೀಪಿಕ್ ಆರ್. ಭೂಸರೆಡ್ಡಿ, ಪಿಎಸ್ ಐ ಮಣಿಕಂಠ ಮತ್ತುಬೆರಳಚ್ಚು ತಜ್ಞರು, ಶ್ವಾನ ತಪಾಸಣಾ ದಳ ಭೇಟಿ ನೀಡಿ ತಪಾಸಣೆ ನಡೆಸಿದರು. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 