ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣ ಹಚ್ಚುವ ಕೆಲಸ: ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಏ.7, ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ, ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯ ಬೇಕೆಂದು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕಿನ ಭೀತಿಯಿಂದ ಹಲವಾರು ಖಾಸಗಿ ವೈದ್ಯರು ಕ್ಲಿನಿಕ್ಗಳನ್ನು ಮುಚ್ಚಿರುವ ವರದಿಗಳು ಬರುತ್ತಿವೆ. ಇದು ಅಮಾನವೀಯ ನಿರ್ಧಾರ. ಇದರಿಂದ ಬೇರೆ ಸಾಮಾನ್ಯ ಕಾಯಿಲೆಯುಳ್ಳವರು ಚಿಕಿತ್ಸೆ ಇಲ್ಲದೆ ಬವಣೆ ಪಡುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಆರೋಗ್ಯ ಇಲಾಖೆ ತಕ್ಷಣ ಮಧ್ಯೆ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು. ತಪಾಸಣಾ ಕಿಟ್ ಕೊರತೆಯಿಂದಾಗಿ ನಿರೀಕ್ಷಿತ ಸಂಖ್ಯೆಯಲ್ಲಿ ಕೊರೊನಾ ಸೋಂಕು ಪರೀಕ್ಷೆ ನಡೆಯುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಅವಶ್ಯಕ ಪ್ರಮಾಣದಲ್ಲಿ ಪೂರೈಕೆ ಮಾಡದಿರುವ ಕಾರಣ ತಮಿಳು ನಾಡು ನೇರವಾಗಿ ಒಂದು ಲಕ್ಷ ತಪಾಸಣಾ ಕಿಟ್ ಗಳನ್ನು ಆಮದು ಮಾಡಿಕೊಳ್ಳುತ್ತಿದೆಯಂತೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಇಂತಹ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 