ಮೊಹರಂ ಹಬ್ಬವನ್ನು ಶಾಂತ ರೀತಿಯಲ್ಲಿ ಆಚರಿಸಿ: ಡಿಎಸ್ಪಿ ಜಮೀರ
Celebrate Muharram in a calm manner: DSP Jameer
ಜಮಖಂಡಿ 02: ಮೊಹರಮ್ ಇದೊಂದು ಹೊಸ ವರ್ಷದ ಹಬ್ಬವಾಗಿದೆ. ಕಳೆದ 6 ದಶಕದಿಂದ ಹಬ್ಬವನ್ನು ಜಾತಿ, ಮತ, ಧರ್ಮ ಭೇಧ-ಭಾವ ಮರೆತು ದೇಶದಲ್ಲಿ ಎಲ್ಲರೂ ಆಚರಣೆ ಮಾಡುತ್ತಾರೆ ಎಂದು ಡಿಎಸ್ಪಿ, ರೋಷನ್ ಜಮೀರ ಹೇಳಿದರು.
ನಗರದ ಶಹರ ಪೋಲಿಸ್ ಠಾಣೆಯಲ್ಲಿ ನಡೆದ ಮೊಹರಮ್ ಹಬ್ಬದ ಹಿಂದು, ಮುಸ್ಲಿಂ ಸಮಾಜದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಎಲ್ಲರು ದೇವರನ್ನು ಸ್ಮರಿಸುತ್ತಾ ಬಂದಿರುವ ದೇಶ. ಸಂತರು, ಸೂಪಿಸಂತರು ತಾವುಗಳು ನಡೆದುಕೊಂಡು ಬಂದ ದಾರಿಯನ್ನು ತೋರಿಸಿದ್ದಾರೆ. ಅವರ ಮಾರ್ಗದಲ್ಲಿ ಹಬ್ಬಗಳನ್ನು ಆಚರಿಸುತ್ತಾ ಬಂದಿರುತ್ತೇವೆ ಎಂದರು.
ಮೊಹರಮ್ ಹಬ್ಬದ ದಿನದಂದು ಅಗ್ನಿಯಲ್ಲಿ ಹಾಯುವ ಸಮಯದಲ್ಲಿ ಯಾರು ಅದನ್ನು ತೂರುವ ಕೆಲಸ ಮಾಡಬಾರದು. ಅದರಿಂದ ಮಕ್ಕಳಿಗೆ, ಮಹಿಳೆಯರಿಗೆ ಯುವಕರಿಗೆ, ವಯೋವೃದ್ಧರಿಗೆ ತೊಂದರೆಯಾಗುತ್ತದೆ. ಎಲ್ಲರೂ ಶಾಂತ ರೀತಿಯಲ್ಲಿ ಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕು. ಮೆರವಣಿೆಗೆ ಸಮಯದಲ್ಲಿ ರಸ್ತೆಯಲ್ಲಿ ಇರುವ ಪಾದಚಾರಿಗಳಿಗೆ ತೊಂದರೆಯಾಗದ ಹಾಗೆ ನೋಡಿಕೊಳ್ಳಬೇಕು. ನಿಮಗಾಗಿ ಪೋಲಿಸ್ ಬಂದು ಬಸ್ತ್ ಏರಿ್ಡಸಲಾಗುತ್ತದೆ. ಮಹಿಳೆಯರ ಮೇಲೆ ಅಸಭ್ಯ ವರ್ತನೆ ಮಾಡಿದರೆ ಅಂತಹವರ ಮೇಲೆ ಕಾನೂನು ಕ್ರಮವನ್ನು ಜರುಗಿಸಬೇಕಾಗುತ್ತದೆ. ಇದೊಂದು ಭಾವಕೈತೆಯ ಹಬ್ಬವಾಗಿದೆ. ಶೇ.80ರಷ್ಟು ಜನ ಹಿಂದುಗಳು ಆಚರಣೆ ಮಾಡುತ್ತಾರೆ. ಶೇ.20 ಮುಸ್ಲಿಂ ಸಮಾಜದವರು ಇರುತ್ತಾರೆ. ಯಾರಿಗೂ ತೊಂದರೆ ಆಗದ ಹಾಗೆ ಹಬ್ಬಗಳನ್ನು ಆಚರಣೆ ಮಾಡಬೇಕು. ನಿಮಗಾಗಿ ನಮ್ಮ ಪೋಲಿಸ್ ಇಲಾಖೆ 24 ತಾಸು ಕಾರ್ಯನಿರ್ವಹಿಸುತ್ತದೆ ಎಂದರು.
ಶಹರ ಪೋಲಿಸ್ ಠಾಣೆಯ ಪಿಎಸ್ಐ. ಅನೀಲ ಕುಂಬಾರ, ಕ್ರೈಂ ಪಿಎಸ್ಐ, ನಾಗರಾಜ ಕಾಜಗಾರ ವೇದಿಕೆಯಲ್ಲಿ ಇದ್ದರು.
ಪ್ರದೀಪ ಮೆಟ್ಟಗುಡ್ಡ ಮಾತನಾಡಿದರು. ಹಿಂದು ಸಮಾಜದ ಮುಖಂಡರು ಹಾಗೂ ಮುಸ್ಲಿಂ ಸಮಾಜದ ಮುಖಂಡರು ಸಭೆಯಲ್ಲಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 