ಬೆಟಗೇರಿ: ಸಂಭ್ರಮದ ಕೂರಿಗೆ ಪೂಜೆ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಟಗೇರಿ 16: ಪ್ರಸಕ್ತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಆರಂಭದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಪ್ರದಾಯದಂತೆ ಹಿರಿಯರು, ರೈತರು ಸಹೋಗದಲ್ಲಿ ಶನಿವಾರ ಜೂ.15 ರಂದು ಕೂರಿಗೆ ಪೂಜೆ ಕಾರ್ಯಕ್ರಮ ಸಡಗರದಿಂದ ನಡೆಯಿತು.
ಬೆಳಗ್ಗೆ 10 ಗಂಟೆಗೆ ಪುರದೇವರ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ, ನೈವೆದ್ಯ ಸಮಪರ್ಿಸಿ ಇಲ್ಲಿಯ ಹಿರಿಯರು, ರೈತರು ಈ ವರ್ಷ ಮುಂಗಾರು, ಹಿಂಗಾರೂ ಉತ್ತಮ ಮಳೆಯಾಗಲಿ ಬೆಳೆ ಹುಲಸಾಗಿ ಬೆಳೆಯಲಿ ಎಂದು ಮೇಘರಾಜನಿಗೆ ಹಾಗೂ ದೇವರಲ್ಲಿ ಮೊರೆ ಹೋಗಿ ಬೇಡಿಕೊಂಡರು.
ಗ್ರಾಮದ ಎಲ್ಲ ರೈತರ, ಹಿರಿಯರ ಒಟ್ಟಿಗೆ ಸೇರಿ ಊರಿನ ಧರೆಪ್ಪ ದೊಡ್ಡೊದ್ದಪ್ಪ ಚಂದರಗಿ ಅವರ ಗದ್ದೆಯೊಂದರಲ್ಲಿ ಕೂರಿಗೆ ಪೂಜೆ ಕಾರ್ಯಕ್ರಮ ನೆರವೇರಿಸಿದ ಬಳಿಕ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಚಾಲನೆ ನೀಡಲಾಯಿತು.
ರಾಮಣ್ಣ ಬಳಿಗಾರ, ಮುತ್ತೆಪ್ಪ ವಡೇರ, ಲಕ್ಷ್ಮಣ ಸೋಮನಗೌಡರ, ಎಮ್.ಐ.ನೀಲಣ್ಣವರ, ಈರಯ್ಯ ಹಿರೇಮಠ, ಲಕ್ಷ್ಮಣ ಚಂದರಗಿ, ವಿಠಲ ಚಂದರಗಿ, ಬಸವಂತ ಚಂದರಗಿ ಸೇರಿದಂತೆ ಯುವಕರು, ರೈತರು, ಮಹಿಳೆಯರು, ವಯೋವೃದ್ಧರು, ಗ್ರಾಮಸ್ಥರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 