ಬೆಟಗೇರಿ: ಸಂಭ್ರಮದ ಕೂರಿಗೆ ಪೂಜೆ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಟಗೇರಿ 16: ಪ್ರಸಕ್ತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಆರಂಭದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಪ್ರದಾಯದಂತೆ ಹಿರಿಯರು, ರೈತರು ಸಹೋಗದಲ್ಲಿ ಶನಿವಾರ ಜೂ.15 ರಂದು ಕೂರಿಗೆ ಪೂಜೆ ಕಾರ್ಯಕ್ರಮ ಸಡಗರದಿಂದ ನಡೆಯಿತು.
ಬೆಳಗ್ಗೆ 10 ಗಂಟೆಗೆ ಪುರದೇವರ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ, ನೈವೆದ್ಯ ಸಮಪರ್ಿಸಿ ಇಲ್ಲಿಯ ಹಿರಿಯರು, ರೈತರು ಈ ವರ್ಷ ಮುಂಗಾರು, ಹಿಂಗಾರೂ ಉತ್ತಮ ಮಳೆಯಾಗಲಿ ಬೆಳೆ ಹುಲಸಾಗಿ ಬೆಳೆಯಲಿ ಎಂದು ಮೇಘರಾಜನಿಗೆ ಹಾಗೂ ದೇವರಲ್ಲಿ ಮೊರೆ ಹೋಗಿ ಬೇಡಿಕೊಂಡರು.
ಗ್ರಾಮದ ಎಲ್ಲ ರೈತರ, ಹಿರಿಯರ ಒಟ್ಟಿಗೆ ಸೇರಿ ಊರಿನ ಧರೆಪ್ಪ ದೊಡ್ಡೊದ್ದಪ್ಪ ಚಂದರಗಿ ಅವರ ಗದ್ದೆಯೊಂದರಲ್ಲಿ ಕೂರಿಗೆ ಪೂಜೆ ಕಾರ್ಯಕ್ರಮ ನೆರವೇರಿಸಿದ ಬಳಿಕ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಚಾಲನೆ ನೀಡಲಾಯಿತು.
ರಾಮಣ್ಣ ಬಳಿಗಾರ, ಮುತ್ತೆಪ್ಪ ವಡೇರ, ಲಕ್ಷ್ಮಣ ಸೋಮನಗೌಡರ, ಎಮ್.ಐ.ನೀಲಣ್ಣವರ, ಈರಯ್ಯ ಹಿರೇಮಠ, ಲಕ್ಷ್ಮಣ ಚಂದರಗಿ, ವಿಠಲ ಚಂದರಗಿ, ಬಸವಂತ ಚಂದರಗಿ ಸೇರಿದಂತೆ ಯುವಕರು, ರೈತರು, ಮಹಿಳೆಯರು, ವಯೋವೃದ್ಧರು, ಗ್ರಾಮಸ್ಥರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 