ವರನಟ ಡಾ.ರಾಜಕುಮಾರ್ ಜಯಂತಿ ಆಚರಣೆ
ಬಳ್ಳಾರಿ, ಏ.24: ನಟಸಾರ್ವಭೌಮ, ವರನಟ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಜಯಂತಿಯನ್ನು ನಗರದ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಶುಕ್ರವಾರ ಆಚರಿಸಲಾಯಿತು.
ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ಡಾ.ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ನಾಡು-ನುಡಿಯ ಅಸ್ಮಿತೆಯ ಪ್ರತೀಕ ಹಾಗೂ ಕನ್ನಡ ಸಂಸ್ಕ್ರತಿಯ ರಾಯಭಾರಿಯಾಗಿರುವ ಡಾ.ರಾಜಕುಮಾರ್ ಅವರು ಕನ್ನಡ ನಾಡು-ನುಡಿ ಮತ್ತು ಸಂಸ್ಕ್ರತಿಗೆ ನೀಡಿದ ಕೊಡುಗೆ ಅಪಾರವಾದುದು ಎಂದರು.
ಕೋವಿಡ್-19 ಹಿನ್ನೆಲೆಯಲ್ಲಿ ಈ ಮಹಾನಟನ ಜಯಂತಿಯನ್ನು ಸಾಂಕೇತಿಕವಾಗಿ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕಚೇರಿಯ ಅಧೀಕ್ಷಕ ವಿ.ಸಿ.ಗುರುರಾಜ್, ಸಿಬ್ಬಂದಿಗಳಾದ ಗುರುನಾಥ, ಟಿ.ಶಿವ, ಮಲ್ಲೇಶಪ್ಪ, ರೋಜ್ಮೇರಿ, ವಿಜಯಕುಮಾರ್, ದೊಡ್ಡ ಹನುಮಂತ, ಮಂಜುನಾಥ ಮಣಿಗಲ್, ಬಾದಾಮಿ ರಾಧಾಕೃಷ್ಣ, ಸಣ್ಣ ಹನುಮಂತ, ಪತ್ರಕರ್ತರಾದ ವೀರಭದ್ರಗೌಡ, ನರಸಿಂಹಮೂತರ್ಿ ಕುಲಕಣರ್ಿ, ಪತ್ರಿಕಾ ಸಿಬ್ಬಂದಿಗಳಾದ ಸತೀಶ್ ಮುರಾಳ್, ಜಯತೀರ್ಥ ಕೂಡ್ಲಿಗಿ ಮತ್ತಿತರರು ಇದ್ದರು.
ರೈತರೊಂದಿಗೆ ಶಾಸಕ ನಾಗೇಂದ್ರ ಸಂವಾದ: ಸಮಸ್ಯೆಗಳ ಇತ್ಯರ್ಥ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 