ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಣೆ
Celebration of Jagadguru Sri Renukacharya's Jayanti
ತಾಳಿಕೋಟೆ 02 : ಪಟ್ಟಣದ ತಾಲೂಕ ಆಡಳಿತದ ವತಿಯಿಂದ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರದೀಪ ದೇವಗಿರಿ ತಹಶೀಲ್ದಾರ್ ಗ್ರೇಡ್- 2 ಅವರು ಶ್ರೀ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಎಲ್ಲರಿಗೂ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷರಾದ ಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳು ಮಾತನಾಡಿ ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆಯನ್ನು ಬಯಸಿದವರು ಅವರು ಧರ್ಮದಿಂದಲೇ ಜಗತ್ತಿಗೆ ಶಾಂತಿ ಲಭಿಸುತ್ತದೆ ಎಂಬ ಸಂದೇಶವನ್ನು ನೀಡಿದ್ದಾರೆ ಅವರ ಬದುಕಿನ ಆದರ್ಶಗಳ ಪ್ರಾಮಾಣಿಕ ಅನುಸರಣೆಯನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಬೇಡ ಜಂಗಮ ಸಮಾಜದ ತಾಲೂಕ ಘಟಕದ ಅಧ್ಯಕ್ಷರಾದ ಶರಣಯ್ಯ ಹಿರೇಮಠ, ಗುರು ಹಿರೇಮಠ, ಶಿವಶಂಕರಯ್ಯ ಹಿರೇಮಠ, ಉಪಾಧ್ಯಕ್ಷ ಶಿವಲಿಂಗಯ್ಯ ಹಿರೇಮಠ, ಕಾರ್ಯದರ್ಶಿ ಈರಯ್ಯ ಹಿರೇಮಠ, ಸಂಘಟನಾ ಕಾರ್ಯದರ್ಶಿ ಗಜದಂಡಯ್ಯ ಹಿರೇಮಠ, ಸಮಾಜದ ಸದಸ್ಯರು ಗಣ್ಯರು ಹಿರಿಯರು ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 