ಜನಗಣತಿ ಅಭಿಯಾನ: ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ
Census Campaign: Self-enumeration by District Judge K.G. Shanti
ಲೋಕದರ್ಶನ ವರದಿ
ಬಳ್ಳಾರಿ 09: ಭಾರತ ಸರ್ಕಾರದ ಮಹತ್ವದ ಯೋಜನೆಯಾದ ‘ಜನಗಣತಿ' ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಆರಂಭಗೊಂಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು, ಬುಧವಾರ ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ‘ಸ್ವಯಂ ಗಣತಿ' ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.
ಈ ಬಾರಿಯ ಜನಗಣತಿಯಲ್ಲಿ ಡಿಜಿಟಲ್ ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ನ್ಯಾಯಾಧೀಶರು ಜನಗಣತಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ತಾವೇ ಆನ್ಲೈನ್ನಲ್ಲಿ ದಾಖಲಿಸಿದರು.
ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ರೂಪಿಸುವಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕರು ಯಾವುದೇ ತಪ್ಪು ಮಾಹಿತಿಯನ್ನು ನೀಡದೆ, ನಿಖರವಾದ ವಿವರಗಳನ್ನು ಒದಗಿಸುವುದು ಕರ್ತವ್ಯವಾಗಿದೆ ಎಂದು ಹೇಳಿದರು.
ಡಿಜಿಟಲ್ ಗಣತಿಯಿಂದ ಸಮಯ ಉಳಿತಾಯವಾಗುವುದಲ್ಲದೆ, ದತ್ತಾಂಶದ ನಿಖರತೆ ಹೆಚ್ಚುತ್ತದೆ. ಸಾರ್ವಜನಿಕರು ಆನ್ಲೈನ್ ಮೂಲಕ ‘ಸ್ವಯಂ ಗಣತಿ' ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ಗಣತಿ ಕಾರ್ಯಕ್ಕೆ ಸಾರ್ವಜನಿಕರು ಪೂರ್ಣ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಇದೇ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಸಹ ಸ್ವಯಂ ಗಣತಿ' ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾಹಿತಿ ನೋಂದಾಯಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 