ನ್ಯೂ ಇಂಡಿಯಾ ಅಶೂರೆನ್ಸ್ನ ಶತಮಾನೋತ್ಸವ ಸಮಾರಂಭ
ಲೋಕದರ್ಶನ ವರದಿ
ರಾಣೇಬೆನ್ನೂರ25: ವಾಹನಗಳ ಸುರಕ್ಷಾ ದೃಷ್ಟಿಯಿಂದ ಅವುಗಳಿಗೆ ತಪ್ಪದೇ ವಿಮೆ ಮಾಡಿಸುವ ಪ್ರವೃತ್ತಿಯನ್ನು ಪ್ರತಿಯೊಬ್ಬ ವಾಹನ ಮಾಲೀಕರು ಬೆಳೆಸಿಕೊಳ್ಳಬೇಕು ಎಂದು ಸ್ಥಳೀಯ ನ್ಯೂ ಇಂಡಿಯಾ ಅಶೂರೆನ್ಸ್ನ ವ್ಯವಸ್ಥಾಪಕ ಮೃತ್ಯುಂಜಯ ಹೇಳಿದರು.
ನಗರದಲ್ಲಿ ನ್ಯೂ ಇಂಡಿಯಾ ಅಶೂರೆನ್ಸ್ನ ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಸ್ಥಳೀಯ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಾಹನಗಳಿಗೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಅವುಗಳಿಗೆ ವಿಮೆ ಮಾಡಿಸಿದ್ದರೆ ವಾಹನಗಳ ಮಾಲೀಕರು ಪರದಾಡುವ ಪರಿಸ್ಥಿತಿ ಉಂಟಾಗುವುದಿಲ್ಲ. ವಿಮಾ ಕಂಪನಿಯ ನಷ್ಟದ ಪ್ರಮಾಣವನ್ನು ಲೆಕ್ಕ ಹಾಕಿ ಪರಿಹಾರ ನೀಡುತ್ತದೆ ಎಂದರು.
ಸ್ಥಳೀಯ ನ್ಯಾಯಾಲಯಗಳ ನ್ಯಾಯಾಧೀಶರುಗಳಾದ ಬಿ.ಜಿ.ಪ್ರಮೋದ, ಮಹೇಶ, ಶರವಣನ್ ಸಮಾರಂಭ ಉದ್ಘಾಟಿಸಿದರು. ಸಮಾರಂಭದ ಅಂಗವಾಗಿ ನೂರಕ್ಕೂ ಅಧಿಕ ಗ್ರಾಹಕರಿಗೆ ವಿಮಾ ಸಂಸ್ಥೆಯ ವತಿಯಿಂದ ತಲಾ ಒಂದೊಂದು ಸಸಿ ಹಾಗೂ ಸಿಹಿಯನ್ನು ವಿತರಿಸಲಾಯಿತು.
ಸದಾನಂದ ಕರೇಗೌಡರ, ಎಸ್.ಸಿ.ಹುಲ್ಮನಿ, ರವೀಂದ್ರ ಗುಂಡಗಟ್ಟಿ, ಲತಾ ದೊಡ್ಮನಿ, ರಮೇಶ ಹಂಪಣ್ಣನವರ, ಜಗದೀಶ ಅಂಕಲಕೋಟಿ, ರವಿ ಹೊಸಪೇಟೆ, ಗುರುರಾಜ ವರಾಹಮೂತರ್ಿ ಹಾಗೂ ವಿಮಾ ಕಂಪನಿಯ ಸಿಬ್ಬಂದಿ ವರ್ಗ ಇದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 