ನ್ಯೂ ಇಂಡಿಯಾ ಅಶೂರೆನ್ಸ್ನ ಶತಮಾನೋತ್ಸವ ಸಮಾರಂಭ
ಲೋಕದರ್ಶನ ವರದಿ
ರಾಣೇಬೆನ್ನೂರ25: ವಾಹನಗಳ ಸುರಕ್ಷಾ ದೃಷ್ಟಿಯಿಂದ ಅವುಗಳಿಗೆ ತಪ್ಪದೇ ವಿಮೆ ಮಾಡಿಸುವ ಪ್ರವೃತ್ತಿಯನ್ನು ಪ್ರತಿಯೊಬ್ಬ ವಾಹನ ಮಾಲೀಕರು ಬೆಳೆಸಿಕೊಳ್ಳಬೇಕು ಎಂದು ಸ್ಥಳೀಯ ನ್ಯೂ ಇಂಡಿಯಾ ಅಶೂರೆನ್ಸ್ನ ವ್ಯವಸ್ಥಾಪಕ ಮೃತ್ಯುಂಜಯ ಹೇಳಿದರು.
ನಗರದಲ್ಲಿ ನ್ಯೂ ಇಂಡಿಯಾ ಅಶೂರೆನ್ಸ್ನ ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಸ್ಥಳೀಯ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಾಹನಗಳಿಗೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಅವುಗಳಿಗೆ ವಿಮೆ ಮಾಡಿಸಿದ್ದರೆ ವಾಹನಗಳ ಮಾಲೀಕರು ಪರದಾಡುವ ಪರಿಸ್ಥಿತಿ ಉಂಟಾಗುವುದಿಲ್ಲ. ವಿಮಾ ಕಂಪನಿಯ ನಷ್ಟದ ಪ್ರಮಾಣವನ್ನು ಲೆಕ್ಕ ಹಾಕಿ ಪರಿಹಾರ ನೀಡುತ್ತದೆ ಎಂದರು.
ಸ್ಥಳೀಯ ನ್ಯಾಯಾಲಯಗಳ ನ್ಯಾಯಾಧೀಶರುಗಳಾದ ಬಿ.ಜಿ.ಪ್ರಮೋದ, ಮಹೇಶ, ಶರವಣನ್ ಸಮಾರಂಭ ಉದ್ಘಾಟಿಸಿದರು. ಸಮಾರಂಭದ ಅಂಗವಾಗಿ ನೂರಕ್ಕೂ ಅಧಿಕ ಗ್ರಾಹಕರಿಗೆ ವಿಮಾ ಸಂಸ್ಥೆಯ ವತಿಯಿಂದ ತಲಾ ಒಂದೊಂದು ಸಸಿ ಹಾಗೂ ಸಿಹಿಯನ್ನು ವಿತರಿಸಲಾಯಿತು.
ಸದಾನಂದ ಕರೇಗೌಡರ, ಎಸ್.ಸಿ.ಹುಲ್ಮನಿ, ರವೀಂದ್ರ ಗುಂಡಗಟ್ಟಿ, ಲತಾ ದೊಡ್ಮನಿ, ರಮೇಶ ಹಂಪಣ್ಣನವರ, ಜಗದೀಶ ಅಂಕಲಕೋಟಿ, ರವಿ ಹೊಸಪೇಟೆ, ಗುರುರಾಜ ವರಾಹಮೂತರ್ಿ ಹಾಗೂ ವಿಮಾ ಕಂಪನಿಯ ಸಿಬ್ಬಂದಿ ವರ್ಗ ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 