ಲಾಕ್ ಡೌನ್ ಕುರಿತು ಕೇಂದ್ರದ ಹೊಸ ಮಾರ್ಗಸೂಚಿ ?
ನವದೆಹಲಿ, ಏ ೧೨, ಲಾಕ್ ಡೌನ್ ಕುರಿತು ಕೇಂದ್ರ ಸರ್ಕಾರ ಭಾನುವಾರ ಅಧಿಕೃತ ಘೋಷಣೆ ಮಾಡಲಿದೆ. ಲಾಕ್ ಡೌನ್ ಏಪ್ರಿಲ್ ೩೦ರವರೆಗೆ ವಿಸ್ತರಿಸಲು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ನಿನ್ನೆಯೇ ನಿಶ್ಚಯಗೊಳಿಸಲಾಗಿತ್ತು. ಆದರೆ, ಭಾನುವಾರ ಇದನ್ನು ಅಧಿಕೃತವಾಗಿ ಘೋಷಿಸಲಿದೆ. ಬಹುತೇಕ ರಾಜ್ಯಗಳು ಲಾಕ್ ಡೌನ್ ಮುಂದುವರಿಸಬೇಕು ಎಂದು ಸಲಹೆ ನೀಡಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಅಧಿಕೃತವಾಗಿ ಪ್ರಕಟಿಸಲಿದೆ.
ಲಾಕ್ ಡೌನ್ ಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸುವ ನಿರೀಕ್ಷೆಯಿದೆ. ರೆಡ್, ಆರೆಂಜ್, ಗ್ರೀನ್ ವಲಯಗಳನ್ನಾಗಿ ಪ್ರಾಂತ್ಯಗಳನ್ನು ವಿಭಜಿಸಲಿದ್ದು. ರೆಡ್ ವಲಯಗಳಲ್ಲಿ ಪೂರ್ಣ ಪ್ರಮಾಣದ ಕಠಿಣ ನಿರ್ಬಂಧಗಳು ಮುಂದುವರಿಯಲಿವೆ. ಆರೆಂಜ್ ವಲಯದಲ್ಲಿ ಸೀಮಿತ ನಿರ್ಬಂಧಗಳು ಮುಂದುವರಿಯಲಿವೆ. ಗ್ರೀನ್ ವಲಯದಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.ಪ್ರಧಾನಿ ನರೇಂದ್ರ ಮೋದಿ ಶನಿವಾರ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಳಗೊಳ್ಳುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ, ಸಮುದಾಯದಲ್ಲಿ ಪ್ರಸರಣಗೊಳ್ಳುವ ಸಾಧ್ಯತೆ ಕುರಿತು ಆತಂಕ ವ್ಯಕ್ತಪಡಿಸಿದರು ಎನ್ನಲಾಗಿದೆ. ಅಗತ್ಯ ವಸ್ತುಗಳು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟಮಾಡುವವರ ಬಗ್ಗೆ ರಾಜ್ಯ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೋಚನೆ ನೀಡಿದ್ದರು. ಜನರ ಜೀವ ಹಾಗೂ ಜೀವನ ರಕ್ಷಿಸುವುದು ಅತ್ಯಂತ ಮುಖ್ಯವಾಗಿದ್ದು, ದೇಶದ ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಗಳು ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ಮೋದಿ ಸಂವಾದದ ವೇಳೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ 