8 ಕೋಟಿ ವಲಸೆ ಕಾರ್ಮಿಕರಿಗೆ 2 ತಿಂಗಳು ಉಚಿತ ಆಹಾರ ಧಾನ್ಯ ವಿತರಣೆಗೆ ಕೇಂದ್ರ ಅಸ್ತು
ನವದೆಹಲಿ, ಮೇ 21, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಸುಮಾರು 8 ಕೋಟಿ ವಲಸಿಗರಿಗೆ ಪ್ರತಿ ವ್ಯಕ್ತಿಗೆ ತಲಾ 5 ಕೆಜಿಯಂತೆ ಎರಡು ತಿಂಗಳ ಕಾಲ ಉಚಿತವಾಗಿ ಆಹಾರ ಧಾನ್ಯಗಳನ್ನು ಹಂಚಿಕೆ ಮಾಡಲು ತನ್ನ ಪೂರ್ವಾನ್ವಯ ಅನುಮೋದನೆ ನೀಡಿದೆ.ಇದಕ್ಕಾಗಿ ಸುಮಾರು 2,982.27 ಕೋಟಿ ರೂ.ಗಳ ಆಹಾರ ಸಹಾಯ ಧನ ಒದಗಿಸಲಿದೆ. ಅಂತರ-ರಾಜ್ಯ ಸಾರಿಗೆ, ನಿರ್ವಹಣಾ ಶುಲ್ಕ ಮತ್ತು ವ್ಯಾಪಾರಿಗಳ ಲಾಭಾಂಶ / ಹೆಚ್ಚುವರಿ ವ್ಯಾಪಾರಿಗಳ ಲಾಭಾಂಶ ವೆಚ್ಚ ಸುಮಾರು 127.25 ಕೋಟಿ ರೂ.ಗಳಾಗಿದ್ದು, ಈಹಣವನ್ನೂ ಕೇಂದ್ರ ಸರ್ಕಾರ ಸಂಪೂರ್ಣವಾಗಿ ಭರಿಸಲಿದೆ. ಇದರಿಂದಾಗಿ ಕೇಂದ್ರ ಸರ್ಕಾರದ ಒಟ್ಟು ಸಹಾಯಧನ 3,109.52 ಕೋಟಿ ಎಂದು ಅಂದಾಜು ಮಾಡಲಾಗಿದೆ. ಕೋವಿಡ್ 19 ರಿಂದಾಗಿ ಉಂಟಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರ ಸಮಸ್ಯೆ ತಗ್ಗಿಸಲಿದೆ.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 