ಕೇಂದ್ರ ಸರ್ಕಾರದ ಶಾಲಾ ಮಣ್ಣು ಆರೋಗ್ಯ ಕಾರ್ಯಕ್ರಮ
Central Government's School Soil Health Program
ಗದಗ ಜುಲೈ 4: ಕೃಷಿಯಲ್ಲಿ ಮಣ್ಣು ಆರೋಗ್ಯವು ಪ್ರಮುಖ ಪಾತ್ರ ವಹಿಸಿದ್ದು, ಸಮತೋಲನ ಗೊಬ್ಬರ ಬಳಕೆ ಮತ್ತು ಮಣ್ಣು ಆರೋಗ್ಯದ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ರೈತರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ, ಕೇಂದ್ರ ಸರ್ಕಾರವು “ಶಾಲಾ ಮಣ್ಣು ಆರೋಗ್ಯ ಕಾರ್ಯಕ್ರಮದ” ಮಣ್ಣು ಆರೋಗ್ಯ ಕಾರ್ಡ ಯೋಜನೆಯನ್ನು ಶಾಲೆಗಳಿಗೆ ಪರಿಚಯಿಸಿದೆ. ಈ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಮಣ್ಣು ಮಾದರಿ ಸಂಗ್ರಹಣೆ, ಮಣ್ಣು ಪರೀಕ್ಷೆ ಮತ್ತು ಮಣ್ಣು ಆರೋಗ್ಯ ಕಾರ್ಡಗಳನ್ನು ಅರ್ಥೈಸುವ ಕುರಿತು ತರಬೇತಿಯನ್ನು ನೀಡಲಾಗುತ್ತದೆ. ಅಲ್ಲದೇ, ಸ್ಥಳೀಯ ಕೃಷಿಕ ಸಮಾಜದ ಪಾಲ್ಗೊಳ್ಳುವಿಕೆಯಿಂದ ಶಾಲೆ ಮತ್ತು ರೈತರ ನಡುವೆ ಸಮನ್ವಯ ನಿರ್ಮಾಣವಾಗಲಿದೆ.
ಈ ನಿಟ್ಟಿನಲ್ಲಿ “ಶಾಲಾ ಮಣ್ಣು ಆರೋಗ್ಯ ಕಾರ್ಯಕ್ರಮ”ವು ರಾಜ್ಯ ಸರ್ಕಾರದ ಸಹಯೋಗದ ಪ್ರಮುಖ ಯೋಜನೆಯಾಗಿದೆ.
ಸದರಿ ಕಾರ್ಯಕ್ರಮವು 2024-25 ನೇ ಸಾಲಿನಿಂದ ಅನುಷ್ಠಾನವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳ 42 ಇಒಖಖ, ಎಓಗಿ, ಕೇಂದ್ರೀಯ ವಿದ್ಯಾಲಯಗಳು ಹಾಗೂ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಗೊಂಡಿದೆ. ಜಿಲ್ಲೆಯಲ್ಲಿ ಸದರಿ ಕಾರ್ಯಕ್ರಮವನ್ನು ಜವಾಹರಲಾಲ್ ನೆಹರು ವಿದ್ಯಾಲಯ, ಸಾ::ಕೊರ್ಲಹಳ್ಳಿ, ತಾ::ಮುಂಡರಗಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ಗುಂಪುಗಳನ್ನು ಮಾಡಿ, ಪ್ರತಿ ಗುಂಪುಗಳಿಂದ ನಿಗದಿತ ಸಂಖ್ಯೆಯ ಮಣ್ಣು ಮಾದರಿಗಳನ್ನು ಸಂಗ್ರಹಿಸಿ, ನುರಿತ ವಿಶ್ಲೇಷಕರು ಮತ್ತು ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಂದ ಮಾದರಿಗಳನ್ನು ವಿಶ್ಲೇಷಿಸಲಾಗುತ್ತದೆ. ವಿಶ್ಲೇಷಣಾ ಫಲಿತಾಂಶಗಳನ್ನು ಮಣ್ಣು ಆರೋಗ್ಯ ಚೀಟಿಗಳ ಮೂಲಕ ಸಂಬಂಧಿಸಿದ ರೈತರಿಗೆ ನೀಡಲಾಗುತ್ತದೆ. 2024-25ರಲ್ಲಿ ಸದರಿ ಕಾರ್ಯಕ್ರಮದಡಿ 50 ರೈತರ ತಾಕುಗಳ ಮಣ್ಣು ಮಾದರಿಗಳನ್ನು ಸಂಗ್ರಹಿಸಿ, ವಿಶ್ಲೇಷಿಸಿ, ಮಣ್ಣು ಆರೋಗ್ಯ ಚೀಟಿಗಳನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿಯೂ ರಾಜ್ಯದಲ್ಲಿ ಕಾರ್ಯಕ್ರಮ ಮುಂದುವರೆದಿದ್ದು, ಪಿ.ಎಂ.ಶ್ರೀ. ಶಾಲೆಗಳಿಗೂ ವಿಸ್ತರಿಸಲು ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಸದರಿ ಕಾರ್ಯಕ್ರಮದಡಿ 50 ಮಣ್ಣು ಮಾದರಿಗಳನ್ನು ಸಂಗ್ರಹಿಸುವ ಗುರಿಯಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 