ಕೊರೊನಾ ಪ್ಯಾಕೇಜ್ನಡಿ ಬಡವರಿಗೆ ೧.೭೦ಲಕ್ಷ ಕೋಟಿ ರೂಪಾಯಿ ಕೇಂದ್ರ ಸರ್ಕಾರ ನೆರವು
ನವದೆಹಲಿ, ಮಾ ೨೬, ಕೊರೊನಾ ವೈರಸ್ ವಿಪತ್ತಿನಿಂದ ದೇಶದ ಆರ್ಥಿಕ ವ್ಯವಸ್ಥೆ ಚೇತರಿಸಿಕೊಳ್ಳುವಂತೆ ಮಾಡಲು ಕೇಂದ್ರ ಸರ್ಕಾರ ೧.೭೦ ಲಕ್ಷ ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದೆ ಈ ಸಂಬಂಧ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ನಡೆಸಿದ ಮಾಧ್ಯಮ ಸಮೀಕ್ಷೆಯಲ್ಲಿ ಹಲವು ಪ್ರಮುಖ ಕ್ರಮಗಳನ್ನು ಪ್ರಕಟಿಸಿದ್ದಾರೆ.
ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಅತ್ಯಂತ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ಉಪಶಮನ ಕ್ರಮಗಳು
1 ಕೊರೊನಾ ಪ್ಯಾಕೇಜ್ ಅಡಿಯಲ್ಲಿ ಬರುವ ಬಡವರಿಗೆ ೧.೭ ಲಕ್ಷ ಕೋಟಿ ರೂಪಾಯಿ ನೆರವು.
2 ಪ್ರಧಾನಿ ಗರಿಬ್ ಕಲ್ಯಾಣ್ ಯೋಜನೆಯಡಿ ಬಡವರಿಗೆ ನೆರವು.
3 ಕೊರೊನಾ ಪ್ರಕರಣಗಳಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಹಾಯಕರಿಗೆ ೫೦ ಲಕ್ಷ ಆರೋಗ್ಯ ವಿಮೆ.
4 ಪ್ರಧಾನಿ ಗರಿಬ್ ಕಲ್ಯಾಣ್ ಆನ್ ಯೋಜನೆ ಮೂಲಕ ೩ ತಿಂಗಳವರೆಗೆ ೮೦ ಕೋಟಿ ಮಂದಿಗೆ ಪಡಿತರ ವಿತರಣೆ.
5 ಈಗ ನೀಡುತ್ತಿರುವ ೫ ಕೆಜಿಗೆ ಹೆಚ್ಚುವರಿಯಾಗಿ ೫ ಕೆಜಿ ಅಕ್ಕಿ ಅಥವಾ ಗೋಧಿ ಪೂರೈಕೆ.
6 ಇವುಗಳ ಜತೆಗೆ ಒಂದು ಕೆಜಿ ದ್ವಿದಳ ಧಾನ್ಯ ಸಹ ಪೂರೈಸಲಾಗುವುದು.
ಬಡವರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ.
7 ಪಿಎಂ ಕಿಸಾನ್ ಯೋಜನೆಯಡಿ ಅವರ ಅಡಿಯಲ್ಲಿ, ಸರ್ಕಾರ ಈಗಾಗಲೇ ರೈತರಿಗೆ ವರ್ಷಕ್ಕೆ ೬,೦೦೦ ರೂ ನೀಡುತ್ತಿದೆ.
8 ಮೊದಲ ಕಂತಾಗಿ ೨ ಸಾವಿರೂಪಾಯಿ ಹಣವನ್ನು ರೈತರ ಖಾತೆಗಳಿಗೆ ತಕ್ಷಣ ಜಮಾಗೊಳಿಸಲು ನಿರ್ಧರಿಸಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 