ಕೊರೊನಾ ಪ್ಯಾಕೇಜ್ನಡಿ ಬಡವರಿಗೆ ೧.೭೦ಲಕ್ಷ ಕೋಟಿ ರೂಪಾಯಿ ಕೇಂದ್ರ ಸರ್ಕಾರ ನೆರವು
ನವದೆಹಲಿ, ಮಾ ೨೬, ಕೊರೊನಾ ವೈರಸ್ ವಿಪತ್ತಿನಿಂದ ದೇಶದ ಆರ್ಥಿಕ ವ್ಯವಸ್ಥೆ ಚೇತರಿಸಿಕೊಳ್ಳುವಂತೆ ಮಾಡಲು ಕೇಂದ್ರ ಸರ್ಕಾರ ೧.೭೦ ಲಕ್ಷ ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದೆ ಈ ಸಂಬಂಧ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ನಡೆಸಿದ ಮಾಧ್ಯಮ ಸಮೀಕ್ಷೆಯಲ್ಲಿ ಹಲವು ಪ್ರಮುಖ ಕ್ರಮಗಳನ್ನು ಪ್ರಕಟಿಸಿದ್ದಾರೆ.
ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಅತ್ಯಂತ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ಉಪಶಮನ ಕ್ರಮಗಳು
1 ಕೊರೊನಾ ಪ್ಯಾಕೇಜ್ ಅಡಿಯಲ್ಲಿ ಬರುವ ಬಡವರಿಗೆ ೧.೭ ಲಕ್ಷ ಕೋಟಿ ರೂಪಾಯಿ ನೆರವು.
2 ಪ್ರಧಾನಿ ಗರಿಬ್ ಕಲ್ಯಾಣ್ ಯೋಜನೆಯಡಿ ಬಡವರಿಗೆ ನೆರವು.
3 ಕೊರೊನಾ ಪ್ರಕರಣಗಳಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಹಾಯಕರಿಗೆ ೫೦ ಲಕ್ಷ ಆರೋಗ್ಯ ವಿಮೆ.
4 ಪ್ರಧಾನಿ ಗರಿಬ್ ಕಲ್ಯಾಣ್ ಆನ್ ಯೋಜನೆ ಮೂಲಕ ೩ ತಿಂಗಳವರೆಗೆ ೮೦ ಕೋಟಿ ಮಂದಿಗೆ ಪಡಿತರ ವಿತರಣೆ.
5 ಈಗ ನೀಡುತ್ತಿರುವ ೫ ಕೆಜಿಗೆ ಹೆಚ್ಚುವರಿಯಾಗಿ ೫ ಕೆಜಿ ಅಕ್ಕಿ ಅಥವಾ ಗೋಧಿ ಪೂರೈಕೆ.
6 ಇವುಗಳ ಜತೆಗೆ ಒಂದು ಕೆಜಿ ದ್ವಿದಳ ಧಾನ್ಯ ಸಹ ಪೂರೈಸಲಾಗುವುದು.
ಬಡವರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ.
7 ಪಿಎಂ ಕಿಸಾನ್ ಯೋಜನೆಯಡಿ ಅವರ ಅಡಿಯಲ್ಲಿ, ಸರ್ಕಾರ ಈಗಾಗಲೇ ರೈತರಿಗೆ ವರ್ಷಕ್ಕೆ ೬,೦೦೦ ರೂ ನೀಡುತ್ತಿದೆ.
8 ಮೊದಲ ಕಂತಾಗಿ ೨ ಸಾವಿರೂಪಾಯಿ ಹಣವನ್ನು ರೈತರ ಖಾತೆಗಳಿಗೆ ತಕ್ಷಣ ಜಮಾಗೊಳಿಸಲು ನಿರ್ಧರಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 