ಕೇಂದ್ರ ಸರ್ಕಾರದ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿವೆ : ವೈ.ಎಂ.ಸತೀಶ
Central government schemes are a boon for the poor: Y.M. Satish
ಕಂಪಿ 14: ಪಟ್ಟಣದ ಕೊಟ್ಟಾಲ್ ರಸ್ತೆಯ ಮಾಜಿ ಶಾಸಕ ಸುರೇಶ ಬಾಬು ಅವರ ತುಂಗಭದ್ರಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಕಂಪ್ಲಿ ಮಂಡಲವತಿಯಿಂದ ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣ್ ಮೋದಿ ಸರ್ಕಾರಕ್ಕೆ 11 ವರ್ಷ ತುಂಬಿದ ಹಿನ್ನಲೆ ವಿಕಸಿತ ಭಾರತ ಸಂಕಲ್ಪ ಸಭೆಯ ಶನಿವಾರ ಜರುಗಿತು.
ಸಭೆಯ ಅಧ್ಯಕ್ಷತೆವಹಿಸಿ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ ಮಾತನಾಡಿ, ಕೇಂದ್ರ ಸರಕಾರದ ಅನೇಕ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕೆಂಬುದು ವಿಕಸಿತ ಭಾರತ ಸಂಕಲ್ಪದ ಉದ್ದೇಶವಾಗಿದೆ. ಕೇಂದ್ರ ಸರಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ಈ ದೇಶದ ಬಡವರ ಸಂಕಷ್ಟ, ಈ ದೇಶದ ರೈತರ ಸಮಸ್ಯೆಗಳನ್ನು ಅರಿತುಕೊಂಡು ಪಿಎಂ ಕೃಷಿ ಸಮ್ಮಾನ್, ಫಸಲ್ ಬಿಮಾ, ಗೊಬ್ಬರದ ಸಬ್ಸಿಡಿ, ಈ ದೇಶದ ಪ್ರತಿ ಮನೆಗೂ ಶೌಚಾಲಯ, ಪಿಎಂ ಆವಾಜ್ ಯೋಜನೆ, ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ನೀಡಿದ ಶ್ರೇಯಸ್ಸು ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.ನಂತರ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ು.ವಿಕಸಿತ ಭಾರತ ಸಂಕಲ್ಪ ಹಿನ್ನಲೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಇತ್ತೀಚೆಗೆ ವಿಮಾನದ ದುರ್ಘಟನೆಯಲ್ಲಿ ಸಾಕಷ್ಟು ಜನರು ಮೃತಪಟ್ಟ ಪರಿಣಾಮ ಒಂದು ನಿಮಿಷಿ ಮೌನಾಚಾರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯರ್ರಂಗಳಿ ತಿಮ್ಮಾರೆಡ್ಡಿ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಸುಗುಣ, ಪುರಸಭೆ ಸದಸ್ಯರಾದ ರಾಮಾಂಜಿನೇಯ, ಟಿ.ವಿ.ಸುದರ್ಶನರೆಡ್ಡಿ, ಆರ್.ಆಂಜನೇಯ, ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ನಗರ ಘಟಕ ಅಧ್ಯಕ್ಷ ಮುರುಳಿ ಮೋಹನ್ ರೆಡ್ಡಿ, ಮುಖಂಡರಾದ ಅಳ್ಳಳ್ಳಿ ವಿರೇಶ, ಪಿ.ಬ್ರಹ್ಮಯ್ಯ, ಜಿ.ಸುಧಾಕರ, ಎಂ.ಗುರುರಾಜ, ದೇವಲಾಪುರ ರವಿ, ಕೊಡಿದಲ್ ರಾಜು, ಬಿ.ದೇವೆಂದ್ರ, ಚಂದ್ರಶೇಖರ ಗೌಡ, ಶ್ರೀನಿವಾಸ, ಶಿವುಕುಮಾರ, ಬಸವಪ್ರಭು, ಹೂವಣ್ಣ, ಕಟ್ಟೆ ವಿಶ್ವನಾಥ, ರಬಿಯಾ ನಿಸಾರ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 