ಮಹಾರಾಷ್ಟ್ರಕ್ಕೆ ಇಂದು ಕೇಂದ್ರ ಅಧ್ಯಯನ ತಂಡ
ಮುಂಬೈ, 22 ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಆಗಿರುವ ಬೆಳೆ ನಷ್ಟದ ಹಾನಿಯನ್ನು ಅಂದಾಜು ಮಾಡಲು ಮೂವರು ಸದಸ್ಯರ ಕೇಂದ್ರ ಅಧ್ಯಯನ ತಂಡ ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಲಿದೆ. ಕೇಂದ್ರ ಕೃಷಿ ಸಚಿವಾಲಯದ ಹಿರಿಯ ಅಧಿಕಾರಿ ಆರ್ಪಿ.ಸಿಂಗ್ ನೇತೃತ್ವದ ಮೂವರು ಹಿರಿಯ ಅಧಿಕಾರಿಗಳ ನೇತೃತ್ವದ ತಂಡ ಇಂದು ನಾಗಪುರ, ಅಮರಾವತಿ ವಲಯಕ್ಕೆ ಭೇಟಿ ನೀಡಿ ಅಕಾಲಿಕ ಭೇಟಿಯಿಂದ ಆಗಿರುವ ಬೆಳೆ ಹಾನಿ ಪರಿಸ್ಥಿತಿಯನ್ನು ಖುದ್ದಾಗಿ ಅಧ್ಯಯನ ಮಾಡಲಿದ್ದಾರೆ. ಕಳೆದ ತಿಂಗಳು ಸುರಿದ ಧಾರಾಕಾರ ಮತ್ತು ಅಕಾಲಿಕ ಮಳೆಯಿಂದ ಈ ವಲಯದಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾಳಾಗಿ ರೈತರು ವಿಪರೀತ ತೊಂದರೆಗೆ ಒಳಗಾಗಿದ್ದಾರೆ. ವಿಧಾನಸಭಾ ಚುನಾವಣೆಯ ಕಾರಣ ರಾಜ್ಯ ಮತ್ತು ಕೇಂದ್ರ ಸಕರ್ಾರಗಳು ರೈತರ ನೆರವಿಗೆ ಧಾವಿಸುವಲ್ಲಿ ವಿಳಂಬವಾಗಿತ್ತು. ಈ ನಡುವೆ ಅನೇಕ ರಾಜಕೀಯ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿ ಬೆಳೆ ಕಳೆದುಕೊಂಡು ತೊಂದರೆಗೆ ಸಿಲುಕಿರುವ ರೈತರ ನೆರವಿಗೆ ಸಕರ್ಾರ ಧಾವಿಸಬೇಕು ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಿದೆ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 