ಉದ್ಯೋಗ ಖಾತ್ರಿ ಕಾರ್ಯಗಾರದಲ್ಲಿ ಪಾಲ್ಗೊಂಡ ಕಾರ್ಮಿಕರಿಗೆ ಪ್ರಮಾಣ ಪತ್ರ
Certificates for workers who participated in the job guarantee workshop
ರಾಣೇಬೆನ್ನೂರು 07: ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಇತ್ತೀಚೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡ ಕಾಯಕ ಬಂಧುಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಶಾಸಕ ಪ್ರಕಾಶ ಕೋಳಿವಾಡ ಆವರು ಕಾಯಕ ಬಂಧುಗಳು ಶ್ರಮಿಕರು. ದೇಶದ ಆರ್ಥಿಕತೆಯ ಸಮಾನತೆಗೆ ಶ್ರಮಿಕ ಬಂಧುಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದರು.
ಸರ್ಕಾರದ ಯೋಜನೆಗಳು ಹತ್ತು ಹಲವು ಅವುಗಳು ಪರಿಪೂರ್ಣ ಜಾರಿಗೊಳಿಸುವಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದ ಅವರು ಕೌಶಲ್ಯತೆ ತರಬೇತಿಗಳು ಮೇಲಿಂದ ಮೇಲೆ ನಡೆದಾಗ ಮಾತ್ರ ಕಾಯಕ ಬಂಧುಗಳಲ್ಲಿ ಹೊಸ ಚೈತನ್ಯ ಮೂಡಲಿದೆ ಎಂದರು.
ಕಾರ್ಯಕ್ರಮವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಮತ್ತು ತಾಲೂಕ ಪಂಚಾಯತ್, ಗ್ರಾಮ ಸ್ವರಾಜ್ ಅಭಿಯಾನ ಕರ್ನಾಟಕ ಸಹಭಾಗಿತ್ವ ಸಂಸ್ಥೆ ನವೋದಯ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಆಯೋಜಿಸಿದ್ದವು. ಪ್ರಾಸ್ತಾನಿಕವಾಗಿ ಮಾತನಾಡಿದ ನೀಡ್ಸ್ ಅಧ್ಯಕ್ಷ ಎಚ್.ಎಫ್. ಆಕ್ಕಿ ಅವರು, ಕಾಯಕ ಬಂಧುಗಳಿಗಾಗಿಯೇ ಇರುವ ಕಾರ್ಯಗಾರಗಳು, ಗ್ರಾಮ ಸ್ವರಾಜ್ ಅಭಿಯಾನದ ಅಡಿಯಲ್ಲಿ ಆಯೋಜಿಸುತ್ತಾ ಬರಲಾಗಿದೆ. ಕಾಯಕ ಬಂಧುಗಳು ಇದನ್ನು ಸಮರ್ಕವಾಗಿ ಪ್ರಯೋಜನ ಪಡೆಯಲು ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಇಓ ಪರಮೇಶ್ವರ್ಪ, ನೀಡ್ಸ್ ಎಚ್.ಎಸ್. ಸುದೀರ, ಸೇರಿದಂತೆ ಸಂಘಟನೆಗಳ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಮತ್ತು ವನಸಿರಿ ಸಂಸ್ಥೆಯ ಸಿಬ್ಬಂದಿಗಳು 200ಕ್ಕೂ ಹೆಚ್ಚು ಕಾಯಕ ಬಂದುಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 