ಉದ್ಯೋಗ ಖಾತ್ರಿ ಕಾರ್ಯಗಾರದಲ್ಲಿ ಪಾಲ್ಗೊಂಡ ಕಾರ್ಮಿಕರಿಗೆ ಪ್ರಮಾಣ ಪತ್ರ
Certificates for workers who participated in the job guarantee workshop
ರಾಣೇಬೆನ್ನೂರು 07: ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಇತ್ತೀಚೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡ ಕಾಯಕ ಬಂಧುಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಶಾಸಕ ಪ್ರಕಾಶ ಕೋಳಿವಾಡ ಆವರು ಕಾಯಕ ಬಂಧುಗಳು ಶ್ರಮಿಕರು. ದೇಶದ ಆರ್ಥಿಕತೆಯ ಸಮಾನತೆಗೆ ಶ್ರಮಿಕ ಬಂಧುಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದರು.
ಸರ್ಕಾರದ ಯೋಜನೆಗಳು ಹತ್ತು ಹಲವು ಅವುಗಳು ಪರಿಪೂರ್ಣ ಜಾರಿಗೊಳಿಸುವಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ಎಂದ ಅವರು ಕೌಶಲ್ಯತೆ ತರಬೇತಿಗಳು ಮೇಲಿಂದ ಮೇಲೆ ನಡೆದಾಗ ಮಾತ್ರ ಕಾಯಕ ಬಂಧುಗಳಲ್ಲಿ ಹೊಸ ಚೈತನ್ಯ ಮೂಡಲಿದೆ ಎಂದರು.
ಕಾರ್ಯಕ್ರಮವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಮತ್ತು ತಾಲೂಕ ಪಂಚಾಯತ್, ಗ್ರಾಮ ಸ್ವರಾಜ್ ಅಭಿಯಾನ ಕರ್ನಾಟಕ ಸಹಭಾಗಿತ್ವ ಸಂಸ್ಥೆ ನವೋದಯ ಶಿಕ್ಷಣ ಮತ್ತು ಪರಿಸರ ಅಭಿವೃದ್ಧಿ ಆಯೋಜಿಸಿದ್ದವು. ಪ್ರಾಸ್ತಾನಿಕವಾಗಿ ಮಾತನಾಡಿದ ನೀಡ್ಸ್ ಅಧ್ಯಕ್ಷ ಎಚ್.ಎಫ್. ಆಕ್ಕಿ ಅವರು, ಕಾಯಕ ಬಂಧುಗಳಿಗಾಗಿಯೇ ಇರುವ ಕಾರ್ಯಗಾರಗಳು, ಗ್ರಾಮ ಸ್ವರಾಜ್ ಅಭಿಯಾನದ ಅಡಿಯಲ್ಲಿ ಆಯೋಜಿಸುತ್ತಾ ಬರಲಾಗಿದೆ. ಕಾಯಕ ಬಂಧುಗಳು ಇದನ್ನು ಸಮರ್ಕವಾಗಿ ಪ್ರಯೋಜನ ಪಡೆಯಲು ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಇಓ ಪರಮೇಶ್ವರ್ಪ, ನೀಡ್ಸ್ ಎಚ್.ಎಸ್. ಸುದೀರ, ಸೇರಿದಂತೆ ಸಂಘಟನೆಗಳ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಮತ್ತು ವನಸಿರಿ ಸಂಸ್ಥೆಯ ಸಿಬ್ಬಂದಿಗಳು 200ಕ್ಕೂ ಹೆಚ್ಚು ಕಾಯಕ ಬಂದುಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 