ರಾಣೇಬೆನ್ನೂರಲ್ಲಿ ಚಂದ್ರಶೇಖರ್ ಪಾಟೀಲ್ ಜನ್ಮ ದಿನೋತ್ಸವ
Chandrashekhar Patil's birthday celebration in Ranebennur
ರಾಣೇಬೆನ್ನೂರು 23: ಚಂಪಾ ಅವರು ಈ ದೇಶ ಕಂಡ ಅಪ್ರತಿಮ ಪ್ರಬುದ್ಧ ಸಾಹಿತಿ. ಸೂಕ್ಷ್ಮ ಸಂವೇದನೆಯ ಮೂಲಕ ಗುರುತಿಸಿಕೊಂಡಿದ್ದ ಚಂದ್ರಶೇಖರ ಪಾಟೀಲರು ಯುವ ಸಾಹಿತಿಗಳಿಗೆ ಬಹು ಮಾರ್ಗದರ್ಶಕರಾಗಿದ್ದರು ಎಂದು ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರಭಾಕರ್ ಶಿಗ್ಲಿ ಹೇಳಿದರು.
ಅವರು, ಇಲ್ಲಿನ ವಾಗೀಶ ನಗರದ ಕಸಾಪ ಭವನದಲ್ಲಿ ಆಯೋಜಿಸಲಾಗಿದ್ದೆ, ಬಡಾವಣೆಯ ಕನ್ನಡದ ಸಾಹಿತಿ, ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ ಹಾಗೂ ಕನ್ನಡ ಹೋರಾಟಗಾರಾಗಿದ್ದ ಚಂದ್ರಶೇಖರ ಪಾಟೀಲ ಅವರ ಚಂದ್ರಶೇಖರ್ ಪಾಟೀಲ್ ಅವರ ಜನ್ಮ ದಿನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡಿದರು. ಚಂಪಾ ಅವರು ತಮ್ಮ ಕಾವ್ಯನಾಮದ ಮೂಲಕ ಚಿರಪರಿಚಿತರು.
ಆಡು ಮುಟ್ಟದ ಗಿಡವಿಲ್ಲ, ಚಂಪಾ ಅವರು ಬರೆಯದಿರುವ ಸಾಹಿತ್ಯವಿಲ್ಲ ಎನ್ನುವಂತೆ ಅವರು ಜನಜನಿತರಾಗಿದ್ದರು ಎಂದರು. ಚಂಪಾ ಅವರು ನಮ್ಮ ಜಿಲ್ಲೆಯವರು ಎನ್ನುವುದು ನಮಗೆಲ್ಲ ಬಹಳ ಹೆಮ್ಮೆ. ಅನೇಕ ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಅರಸಿ ಬಂದಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದಾಗ ಅಭಿವೃದ್ಧಿಗಾಗಿ ಸಾಕಷ್ಟು ಪರಿಶ್ರಮ ಪಟ್ಟವರು 2017 ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಸಮ್ಮೇಳನ ಅಧ್ಯಕ್ಷರಾಗಿ ಹೊಸ ದಿಕ್ಕುಗಳನ್ನು ತೋರಿಸಿದ ಮಹಾನ್ ಚೇತನ ಅವರಾಗಿದ್ದರು ಎಂದರು. ಕಾರ್ಯಕ್ರಮದಲ್ಲಿ ಹೋಬಳಿ ಘಟಕದ ಅಧ್ಯಕ್ಷ ಬಸನಗೌಡ ಉಮ್ಮನಗೌಡ್ರ, ರವಿಕುಮಾರ ಪಾಟೀಲ, ಚಂದ್ರಶೇಖರ ಮಡಿವಾಳರ, ಪರಶುರಾಮ ಸವಣೂರ, ಕರಬಸಪ್ಪ ಏಕಬೋಟೆ, ಭರಮಪ್ಪ ಕುರುವತ್ತಿ ಸೇರಿದಂತೆ ಪದಾಧಿಕಾರಿಗಳು ದತ್ತಿಧಾನಿಗಳು ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 