ಚಂದ್ರಯಾನ-2: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿಳಿಯಲು ತಿಂಗಳೂರು ಚಂದ್ರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ
ಚೆನ್ನೈ, ಸೆ 06: ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಇಸ್ರೋ ಸಾಹಸವನ್ನು ನೋಡಲು ಇಡೀ ದೇಶ ಕಾತರದಿಂದ ಕಾಯುತ್ತಿದ್ದಾರೆ ಈ ನಡುವೆ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ನಾಮ್ಳೆ, ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಯುವಂತೆ ತಮಿಳುನಾಡಿನ ತಿಂಗಳೂರು ಚಂದ್ರನ್ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಗಿದೆ ಕೈಲಾಸನಾಥ ದೇವಾಲಯ ಅಥವಾ ಚಂದ್ರ ದೇವಾಲಯದ ವ್ಯವಸ್ಥಾಪಕ ವಿ ಕಣ್ಣನ್ ಈ ವಿಷಯ ತಿಳಿಸಿದ್ದು, ಚಂದ್ರನ ಕೃಪೆಗಾಗಿ, ಶುಕ್ರವಾರ ಸಂಜೆ ವಿಶೇಷ ಅಭಿಷೇಕ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಶುಕ್ರವಾರ ತಡರಾತ್ರಿ 1.30ರಿಂದ 2.30ರ ವೇಳೆಗೆ ಭೂಮಿಯಿಂದ ಕಾಣಿಸದ ಚಂದ್ರನ ಮತ್ತೊಂದು ಭಾಗದ ಮೇಲೆ ಇಳಿಯುವ ಸಾಹಸವನ್ನು ವಿಕ್ರಮ್ ನಡೆಸಲಿದೆ. ಭೂಮಿಯ ನೈಸರ್ಗಿಕ ಉಪಗ್ರಹವಾಗಿರುವ ಚಂದ್ರನಲ್ಲಿ ಹುದುಗಿರುವ ರಹಸ್ಯಗಳನ್ನು ವಿಕ್ರಮ್ ಬೇಧಿಸಲಿದೆ. ಜುಲೈ 22ರಂದು ಚಂದ್ರಯಾನ-2 ಉಡಾವಣೆಯ ಸಂದರ್ಭದಲ್ಲೂ ವಿಶೇಷ ಪೂಜೆ ಸಲ್ಲಿಸಿ ಅಕ್ಕಿ ಹಾಗೂ ಬೆಲ್ಲದಿಂದ ಮಾಡಿದ ಪ್ರಸಾದ ವಿತರಣೆ ಮಾಡಲಾಗಿತ್ತು. ಸತತ 48 ದಿನಗಳ 3.44 ಲಕ್ಷ ಕಿಮೀ ಪ್ರಯಾಣ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಲಾಗಿತ್ತು. ಇಂದು ತಡರಾತ್ರಿ 1.30ರಿಂದ ಲ್ಯಾಂಡರ್ ಅನ್ನು ನಿಧಾನವಾಗಿ ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಸುಮಾರು 15 ನಿಮಿಷಗಳಲ್ಲಿ ಮುಗಿಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಲ್ಯಾಂಡರ್ ಚಂದ್ರನ ಮೇಲೆ ಇಳಿದ ಬಳಿಕ ಲ್ಯಾಂಡರ್ ತೆರೆದುಕೊಂಡು ಪ್ರಜ್ಞಾನ್ ಹೆಸರಿನ ರೋವರ್ ಹೊರಬರಲಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 