ಚಂದ್ರಯಾನ್ -2 ಚಂದ್ರನ ಕಕ್ಷೆಗೆ ಸೇರ್ಪಡೆ
ಚೆನ್ನೈ, ಆಗಸ್ಟ್ 20 ಶ್ರೀಹರಿಕೋಟದ ಎಸ್ಎಚ್ಎಆರ್ ಶ್ರೇಣಿಯಿಂದ ಜುಲೈ 22ರಂದು ಉಡಾವಣೆಗೊಂಡ 'ಚಂದ್ರಯಾನ್ -2' ಬಾಹ್ಯಾಕಾಶ ನೌಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸೆಪ್ಟೆಂಬರ್ ಏಳರಂದು ಇಳಿಯಲು, ಇಂದು ಚಂದ್ರನ ಕಕ್ಷೆಗೆ ಪ್ರವೇಶಿಸಿದ್ದು, ಈ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಂಗಳವಾರ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಚಂದ್ರ ಕಕ್ಷೆ ಒಳಸೇರುವಿಕೆ (ಎಲ್ಒಐ) ಕಾರ್ಯಾಚರಣೆ ಇಂದು ಬೆಳಗ್ಗೆ 9.02ಕ್ಕೆ ಯಶಸ್ವಿಯಾಗಿ ಯೋಜನೆಯಂತೆ ಬೋರ್ಡ್ ಪೂರ್ಣಗೊಂಡಿದೆ ಎಂದು ಇಸ್ರೋ ತಿಳಿಸಿದೆ. ಜುಲೈ 22ರಂದು ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ್-2 ಅನ್ನು ಉಡಾವಣೆ ಮಾಡಲಾಗಿತ್ತು, 13 ದಿನಗಳ ಕಾಲ ಚಂದ್ರನ ಕಕ್ಷೆಯಲ್ಲಿ ಸುತ್ತಲಿರುವ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಸೆಪ್ಟಂಬರ್ 7 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಚಂದ್ರನ ಪಥವನ್ನು ಯಶಸ್ವಿಯಾಗಿ ಪ್ರವೇಶಿಸಿದ ಚಂದ್ರಯಾನ್ -2 ಆಗಸ್ಟ್ 14ರಂದು ಭೂ ಕಕ್ಷೆಯ ಸಂಪರ್ಕ ಕಡಿದುಕೊಂಡು ಚಂದ್ರನತ್ತ ಮುಖ ಮಾಡಿದೆ. ಪ್ರಜ್ಞಾನ್ ಎಂಬ ರೋವರ್ ಒಳಗೊಂಡಿರುವ ವಿಕ್ರಮ್ ಎಂಬ ಲ್ಯಾಂಡರ್ ಚಂದ್ರಯಾನ ನೌಕೆಯ ಮತ್ತೊಂದು ಆರ್ಬಿಟರ್ ನಿಂದ ಬಿಡುಗಡೆಯಾಗಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 