ಚಂದ್ರಯಾನ್ -2 ಚಂದ್ರನ ಕಕ್ಷೆಗೆ ಸೇರ್ಪಡೆ
ಚೆನ್ನೈ, ಆಗಸ್ಟ್ 20 ಶ್ರೀಹರಿಕೋಟದ ಎಸ್ಎಚ್ಎಆರ್ ಶ್ರೇಣಿಯಿಂದ ಜುಲೈ 22ರಂದು ಉಡಾವಣೆಗೊಂಡ 'ಚಂದ್ರಯಾನ್ -2' ಬಾಹ್ಯಾಕಾಶ ನೌಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸೆಪ್ಟೆಂಬರ್ ಏಳರಂದು ಇಳಿಯಲು, ಇಂದು ಚಂದ್ರನ ಕಕ್ಷೆಗೆ ಪ್ರವೇಶಿಸಿದ್ದು, ಈ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಂಗಳವಾರ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಚಂದ್ರ ಕಕ್ಷೆ ಒಳಸೇರುವಿಕೆ (ಎಲ್ಒಐ) ಕಾರ್ಯಾಚರಣೆ ಇಂದು ಬೆಳಗ್ಗೆ 9.02ಕ್ಕೆ ಯಶಸ್ವಿಯಾಗಿ ಯೋಜನೆಯಂತೆ ಬೋರ್ಡ್ ಪೂರ್ಣಗೊಂಡಿದೆ ಎಂದು ಇಸ್ರೋ ತಿಳಿಸಿದೆ. ಜುಲೈ 22ರಂದು ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ್-2 ಅನ್ನು ಉಡಾವಣೆ ಮಾಡಲಾಗಿತ್ತು, 13 ದಿನಗಳ ಕಾಲ ಚಂದ್ರನ ಕಕ್ಷೆಯಲ್ಲಿ ಸುತ್ತಲಿರುವ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಸೆಪ್ಟಂಬರ್ 7 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಚಂದ್ರನ ಪಥವನ್ನು ಯಶಸ್ವಿಯಾಗಿ ಪ್ರವೇಶಿಸಿದ ಚಂದ್ರಯಾನ್ -2 ಆಗಸ್ಟ್ 14ರಂದು ಭೂ ಕಕ್ಷೆಯ ಸಂಪರ್ಕ ಕಡಿದುಕೊಂಡು ಚಂದ್ರನತ್ತ ಮುಖ ಮಾಡಿದೆ. ಪ್ರಜ್ಞಾನ್ ಎಂಬ ರೋವರ್ ಒಳಗೊಂಡಿರುವ ವಿಕ್ರಮ್ ಎಂಬ ಲ್ಯಾಂಡರ್ ಚಂದ್ರಯಾನ ನೌಕೆಯ ಮತ್ತೊಂದು ಆರ್ಬಿಟರ್ ನಿಂದ ಬಿಡುಗಡೆಯಾಗಲಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 