ಮಹಿಳೆಯರ ರಕ್ಷಣೆಯಲ್ಲಿ ಚನ್ನಮ್ಮ ಮಹಿಳಾ ಪೋಲಿಸ್ ಪಡೆ
ಲೋಕದರ್ಶನ ವರದಿ
ಗಜೇಂದ್ರಗಡ 19: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿ. 15ರಂದು ಮಧ್ಯರಾತ್ರಿ 11-30 ಗಂಟೆಗೆ ಲಕ್ಷ್ಮೀ ಮಂಜುನಾಥ ದಂಡಗಲ್ಲ ವಯಾ 23 ವರ್ಷ ಸಾ. ಧಾರವಾಡ ಇವಳು ಮನೆಯ ಕುಟುಂಬದವರೊಡನೆ ಸಣ್ಣ ಪುಟ್ಟ ಜಗಳ ಕಾಯ್ದು ಸಂಬಂಧಿಕರ ಊರಾದ ಲಿಂಗಸೂಗೂರುಗೆ ಹೋಗುವಾಗ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಇಳಿದು ವಿಶ್ರಾಂತಿ ಪಡೆಯುತ್ತಿದ್ದಾಗ ಗಜೇಂದ್ರಗಡ ಪೊಲೀಸ್ ಠಾಣೆಯ ಪಿಎ ಆರ್ ವೈ ಜಲಗೇರಿ ಹಾಗೂ ಇಬ್ಬರು"ಚೆನ್ನಮ್ಮ ಮಹಿಳಾ ಪೊಲೀಸ್ ಪಡೆ" ಯವರು ಬಂದು ನನ್ನ ಬಗ್ಗೆ ವಿಚಾರಿಸಿ ಗಜೇಂದ್ರಗಡದ ಸಕರ್ಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಆರೋಗ್ಯ ತಪಾಸಣೆ ಮಾಡಿಸಿ ಊಟ ಉಪಚಾರ ಹಾಗೂ ಹಣ್ಣುಗಳನ್ನು ಕೊಟ್ಟು ಬೆಳಗಿನವರೆಗೆ ವಿಶ್ರಾಂತಿ ಪಡೆಯಲು ಬಿಟ್ಟು ಹೋದರು.
ಪುನಃ ದಿ. 16ರಂದು ಆಸ್ಪತ್ರೆಗೆ ಗಜೇಂದ್ರಗಡದ ಠಾಣಾಧಿಕಾರಿಗಳು ಬಂದು ನನ್ನ ಆರೋಗ್ಯದ ಬಗ್ಗೆ ವಿಚಾರಿಸಿದರು ನನ್ನ ಆರೋಗ್ಯದಲ್ಲಿ ಚೇತರಿಕೆ ಆಗಿದ್ದರಿಂದ ನಾನು ಮರಳಿ ನನ್ನ ಊರಾದ ಧಾರವಾಡಕ್ಕೆ ಹೋಗಲು ಅವರೇ ಹಣದ ಸಾಹಯ ಕೂಡಾ ಮಾಡಿದರು.
ಆದ್ದರಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ, ಗಜೇಂದ್ರಗಡ ಪೊಲೀಸ್ ಠಾಣೆಯ ಪಿ ಎಸ್ ಐ ಗೂ ಹಾಗೂ ವಿಶೇಷವಾಗಿ ಚನ್ನಮ್ಮ ಮಹಿಳಾ ಪೊಲೀಸ್ ಪಡೆ ಯವರಿಗೆ ಲಕ್ಷೀ ದಂಡಗಲ್ಲ ಅಭಿನಂದನೆ ಸಲ್ಲಿಸಿದ್ದಾಳೆ. ಈ ರೀತಿ ಮಹಿಳೆಯರಿಗೆ ತೊಂದರೆ ಆದಾಗ ಚೆನ್ನಮ್ಮ ಮಹಿಳಾ ಪೊಲೀಸ್ ಪಡೆಯವರು ಸಾಹಯ ಮಾಡಲು ಸದಾ ಟೊಂಕ ಕಟ್ಟಿ ನಿಂತಿರುತ್ತಾರೆ ಎನ್ನವುದಕ್ಕೆ ಇದು ಜಿವಂತ ಸಾಕ್ಷಿ ಎನಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 