ಖಾಸಗಿ ಭೂಮಿ ಕಬ್ಜಾ ಮಾಡಲು ಕೆಲವರ ಹುನ್ನಾರ : ಚನ್ನಪ್ಪ ಆರೋಪ
Channappa alleges that some are trying to seize private land
ಕಂಪ್ಲಿ 10: ಖಾಸಗಿ ಭೂಮಿಯನ್ನು ಕಬ್ಜಾ ಮಾಡಲು ಕೆಲವರು ಹುನ್ನಾರ ನಡೆಸಿದ್ದಾರೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸಂಘದ ಕಂಪ್ಲಿ ಕ್ಷೇತ್ರಾಧ್ಯಕ್ಷ ಸಿ.ಎ.ಚನ್ನಪ್ಪ ಆರೋಪಿಸಿದರು. ಅವರು ಶನಿವಾರ ಪಟ್ಟಣದ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ನೇತೃತ್ವವಹಿಸಿ ಮಾತನಾಡಿ, ಪಟ್ಟಣದ 4/6ನೇ ವಾರ್ಡಿನ ಸರ್ವೆ ನಂ.1400ನಲ್ಲಿ 5 ಎಕರೆ 34 ಸೆಂಟ್ಸ್ ಜಾಗ ಇದ್ದು, ಇದರಲ್ಲಿ 50ಸೆಂಟ್ಸ್ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಳ್ಳಲು ಹೊರಟಿದ್ದಾರೆ. ಈಗಾಗಲೇ ಕೆಲವರು ಸರ್ಕಾರಿ ಉದ್ಯಾನವನ ಎಂದು ಪುರಸಭೆಗೆ ಮನವಿ ಮಾಡಿದ್ದಾರೆ. 1982ರಲ್ಲಿ ಇಲ್ಲಿನ ಜಾಗವು ಎನ್ಎ ಆಗಿದೆ. ವಲಿಸಾಬ್ ಅವರ ಆಸ್ತಿಯನ್ನು ಸರ್ಕಾರಿ ಜಾಗವೆಂದು ಸುಳ್ಳು ಹೇಳಿ, ವಶಪಡೆಸಿಕೊಳ್ಳಲು ಹೊರಟಿದ್ದಾರೆ. 50 ಸೆಂಟ್ಸ್ ಜಾಗವನ್ನು ಕಾನೂನಾತ್ಮಕವಾಗಿ ತೆರವುಗೊಳಿಸಲಾಗಿದೆ. 104 ನಿವೇಶಗಳನ್ನು ಮಾರಾಟ ಮಾಡಿದ್ದು, ಇನ್ನೂ 50ಸೆಂಟ್ಸ್ ಜಾಗ ಉಳಿದಿದೆ. ಆದ್ದರಿಂದ ಈ ಜಾಗವನ್ನು ಬೇರೆಯವರಿಗೆ ಒತ್ತುವರಿ ಮಾಡುವುದಕ್ಕೆ ಬಿಡುವುದಿಲ್ಲ. ಪುರಸಭೆ ಅಧಿಕಾರಿಗಳು ದಾಖಲೆಗಳನ್ನು ಪರೀಶೀಲಿಸಿ, ಫಾರಂ ನಂ-3 ನೀಡಿದ್ದು, ಅಧಿಕಾರಿಗಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ವಾದ(ಪ್ರೋ.ಬಿ.ಕೃಷ್ಣಪ್ಪ) ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಬಸಪ್ಪ ಭಾವಿಕಟ್ಟಿ, ಭೀಮವಾದ ಸಂಘಟನೆಯ ಪೃಥ್ವಿರಾಜ್ಸಿಂಗ್, ಯುವ ಮುಖಂಡರಾದ ಐ.ಶಂಕರ್, ಹುಸೇನಪ್ಪ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 