ಚೆಕ್ ಬೌನ್ಸ್ ಪ್ರಕರಣ : ಯುಎಇ ನಲ್ಲಿ ತುಷಾರ್ ವೆಲ್ಲಪ್ಪಲ್ಲಿ ಸೆರೆ
ಕೊಚ್ಚಿ, ಆಗಸ್ಟ್ 22 ಕೇರಳದ ವಯನಾಡು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ಭಾರತ್ ಧರ್ಮ ಜನಸೇನೆ ಅಧ್ಯಕ್ಷ ತುಷಾರ್ ವೆಲ್ಲಪ್ಪಲ್ಲಿ ಅವರನ್ನು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಇ ಪೊಲೀಸರು ಬಂಧಿಸಿದ್ದಾರೆ.
ಅವರನ್ನು ಮಂಗಳವಾರ ಸಂಜೆ ಅಜ್ಮಾನ್ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.ತ್ರಿಶೂರ್ ಮೂಲದ ಉದ್ಯಮಿಯೊಬ್ಬರು ಅಜ್ಮಾನ್ನಲ್ಲಿ ನೆಲೆಸಿದ್ದಾರೆ ಎಂದು ಯುಎಇ ಪೊಲೀಸರ ಮುಂದೆ ನಾಜಿಲ್ ಎಂಬುವವರು ನೀಡಿದ ದೂರಿನ ನಂತರ ಅವರನ್ನು ಬಂಧಿಸಲಾಗಿದೆ. 10 ಮಿಲಿಯನ್ ದಿರ್ಹಮ್, ಸುಮಾರು 10 ಕೋಟಿ ರೂ.ಗಳ ಚೆಕ್ ಬೌನ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಎರಡು ದಿನಗಳ ಹಿಂದೆ ಪ್ರಕರಣ ದಾಖಲಿಸಿದ್ದ ದೂರುದಾರರು ವೆಲ್ಲಪ್ಪಲಿ ಅವರು ನಾಜಿಲ್ ಅವರನ್ನು ಹೊಟೇಲ್ ಗೆ ಕರೆಸಿಕೊಂಡು 10 ವರ್ಷಗಳ ಹಿಂದೆ ನೀಡಿದ್ದ ಬೌನ್ಸ್ ಚೆಕ್ ಕುರಿತು ಮಾತುಕತೆ ಮಾಡಿದ್ದರು ಆಗ ಉಪ ಗುತ್ತಿಗೆದಾರರಾಗಿದ್ದ ನಜಿಲ್ ಅಬ್ದುಲ್ಲಾ ಅವರಿಗೆ.
ದಿನಾಂಕ ನಮೂದು ಮಾಡದೆ ತುಷಾರ್ ಖಾಲಿ ಚೆಕ್ ಅನ್ನು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ಬಿಡಿಜೆಎಸ್ ನಾಯಕನ ಆಪ್ತ ಉದ್ಯಮಿಗಳ ಸಹಾಯದಿಂದ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ದಾಖಲೆ ಸಲ್ಲಿಕೆ ಸೇರಿದಂತೆ ಕಾನೂನು ವಿಧಿವಿಧಾನ ಪೂರ್ಣಗೊಳಿಸಿದ ನಂತರ ಅವರ ಬಿಡುಗಡೆಗಾಗಿ ಪ್ರಯತ್ನ ನಡೆಯಲಿದೆ ಎನ್ನಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 