ರಾಸಾಯನಿಕ ಮಿಶ್ರಿತ ಕುಂಕುಮ, ಶ್ರೀಗಂಧ ನಿಷೇಧ: ಪೂಜಾರಿ
ಬೆಂಗಳೂರು, ಅ 31: ರಾಜ್ಯದ ದೇವಾಲಯಗಳಲ್ಲಿ ದೇಹಕ್ಕೆ ಮಾರಕವಾಗಿರುವ ಕಲಬೆರಕೆ ಕುಂಕುಮ ಮತ್ತು ಶ್ರೀಗಂಧ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗುವುದು
ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಘೋಷಿಸಿದ್ದಾರೆ.
ಅದರಲ್ಲೂ ಪ್ರಮುಖವಾಗಿ
ಮುಜರಾಯಿ ದೇವಾಲಯಗಳಲ್ಲಿ ಮೊದಲ ಹಂತದಲ್ಲಿ ರಾಸಾಯನಿಕ
ಮಿಶ್ರಿತ ಕುಂಕುಮ, ಶ್ರೀಗಂಧ ಬಳಕೆ ಮತ್ತು ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಅವರು, ಕುಂಕುಮ ಬಣ್ಣ ಹೆಚ್ಚಿಸಲು ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಇದು ಆರೋಗ್ಯದ ಮೇಲೆ
ಗಂಭೀರ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಬಂದಿರುವ ದೂರುಗಳನ್ನು ಪರಿಗಣಿಸಿ ಕ್ರಮ ತೆಗದುಕೊಳ್ಳಲಾಗುತ್ತಿದೆ
ಎಂದರು.
ಮುಜರಾಯಿ ದೇವಾಲಯಗಳಲ್ಲಿ
ವಿಗ್ರಹ, ಚಿನ್ನ-ಬೆಳ್ಳಿ ಆಭರಣಗಳು ಕಳುವಾಗುವ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ಒದಗಿಸುವ ಸಂಬಂಧ ಜಿಲ್ಲಾಧಿಕಾರಿಗಳು
ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಸಭೆ ನಡೆಸಿ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು
ಎಂದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 