ಚೆನ್ನೈ ರೈಲು ಉ.ಕ ಪ್ರಯಾಣಿಕರಿಗೆ: ಸಂಸದ ಕರಡಿ
ಲೋಕದರ್ಶನ ವರದಿ
ಕೊಪ್ಪಳ 15: ಹುಬ್ಬಳ್ಳಿ-ಚೆನ್ನೈ ನಡುವೆ ನೇರ ಸಂಪರ್ಕ ಕಲ್ಪಿಸಲು ಉತ್ತರ ಕನರ್ಾಟಕ ಭಾಗದ ಪ್ರಯಾಣಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ನೂತನವಾಗಿ ಹುಬ್ಬಳ್ಳಿ ಚೆನ್ನೈ ನಡುವೆ ರೈಲು ಗಾಡಿ ವಿಶೇಷ ಎಕ್ಸ್ಪ್ರೇಸ್ ವಾರದಲ್ಲಿ ಎರಡು ದಿನ ಪ್ರಾರಂಭಗೊಂಡಿರುವುದು ಸಂತಸ ತಂದಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.
ಅವರು ಶನಿವಾರದಂದು ಸಂಜೆ ಇಲ್ಲಿನ ರೇಲ್ವೆ ನಿಲ್ದಾಣದಲ್ಲಿ ಪ್ರಪ್ರಥಮವಾಗಿ ಆಗಮಿಸಿದ ಹುಬ್ಬಳ್ಳಿ ಚೆನ್ನೈ ಎಂಜಿಆರ್ ಸೆಂಟ್ರಲ್ ಎಕ್ಸ್ಪ್ರೇಸ್ ಗಾಡಿಗೆ ಚಾಲನೆ ನೀಡಿ ಮಾತನಾಡಿ ಈ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿಸಲು ನಮ್ಮ ಕೇಂದ್ರ ಸರಕಾರ ಶ್ರಮಿಸಿದೆ ಮತ್ತು ಪ್ರಯಾಣಿಕರ ಬೇಡಿಕೆಗಳಿಗೆ ನೇರ ಸ್ಪಂದನೆ ನೀಡಿ ರೈಲು ಸಂಚಾರ ಆರಂಭಿಸಿದೆ ಎಂದರು.ಕೊಪ್ಪಳ ರೈಲು ನಿಲ್ದಾಣದಲ್ಲಿ ಅಭಿಮಾನಿಗಳಿಂದ ನೂತನ ರೈಲುಗಾಡಿಗೆ ಪೂಜೆ ಸಲ್ಲಿಸಿದ ನಂತರ ಸನ್ಮಾನ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಮುನಿರಾಬಾದ್-ಮೆಹೆಬೂಬ್ನಗರ ರೇಲ್ವೆ ಕಾಮಗಾರಿ ತ್ವರಿತಗತಿಯಲ್ಲಿ ಕೇಂದ್ರ ಸರಕಾರ ಕ್ರಮಕೈಗೊಳ್ಳಲಿದೆ, ಇನ್ನು ಒಂದೆರೆಡು ರೈಲುಗಳು ಈ ಭಾಗದಲ್ಲಿ ಸಂಚಾರಿಸಲಿವೆ ಇದಕ್ಕೆ ಕೇಂದ್ರ ರೇಲ್ವೆ ಸಚಿವ ಸುರೇಶ ಅಂಗಡಿ ಮತ್ತು ಕೇಂದ್ರ ಸರಕಾರಕ್ಕೆ ಅಭಿನಂದಿಸುವುದಾಗಿ ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಗವಿಸಿದ್ದಪ್ಪ ಕರಡಿ, ಮುಖಂಡರಾದ ತೋಟಪ್ಪ ಕಾಮನೂರು, ಬಸವರಾಜ್ ಭೋವಿ, ಗವಿಸಿದ್ದಪ್ಪ ಜಂತಗಲ್, ಗಣೇಶ ಹೊರತಟ್ನಾಳ್, ಹೇಮಲತಾ ನಾಯಕ, ಪ್ರಶಾಂತ ರಾಯ್ಕರ್, ವೈಜನಾಥ ದಿವಟರ್, ಮಂಜುನಾಥ ಮುಸಲಾಪೂರು ಕಾರ್ಯಕರ್ತರು ಅಭಿಮಾನಿಗಳು ಪಾಲ್ಗೊಂಡಿದ್ದರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 