ಸಿರುಗುಪ್ಪ 72ನೇ ಸ್ವಾತಂತ್ರ್ಯ ದಿನ ಆಚರಣೆ ಪೂರ್ವಭಾವಿ ಸಭೆ
ಲೋಕದರ್ಶನ ವರದಿ
ಸಿರುಗುಪ್ಪ04: ತಾಲ್ಲೂಕು ಆಡಳಿತ ಆಗಷ್ವ 15ರಂದು ಜರುಗುವ 72ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಕ್ರಮಭದ್ಧವಾಗಿ ಆಚರಣೆ ಮಾಡಬೇಕು, ಎಂದು ತಹಶೀಲ್ದಾರ್ ಎಂ ಸುನಿತಾ ಹೇಳಿದರು ತಾಲೂಕಲ್ಲಿ ಎಲ್ಲ ಸಂಘ ಸಂಸ್ಥೆಗಳ ಸಂಸ್ಥೆ ವಿವಿಧ ಇಲಾಖೆ ಶಾಲಾ ಕಾಲೇಜುಗಳಲ್ಲಿ ಬೆಳಿಗ್ಗೆ 7-30 ರೊಳಗೆ ರಾಷ್ಟ್ರಧ್ವಜಾರೋಹಣ ನೆರವೆರಿಸುವುದು.
ತಾಲ್ಲೂಕು ಕ್ರೀಡಾ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ತಹಸೀಲ್ದಾರರಿಂದ ಭಾರತದ ಧ್ವಜಾರೋಹಣ ಮಾಡಿ, ವಂದನೆ ಸ್ವೀಕಾರ ಹಾಗೂ ಶಾಂತಿ ಸಂದೇಶ ನೀಡುವುದು. ಎಲ್ಲಾ ಕಚೇರಿ ಕಟ್ಟಡ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡುವುದು. ಎಲ್ಲಾ ಶಾಲಾ ಕಾಲೇಜು ಮಕ್ಕಳಿಂದ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ, ವಿವಿಧ ಸ್ಪಧರ್ೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಬಹುಮಾನ ಪ್ರದಾನ, ಶಾಸಕರು, ಜಿಲ್ಲಾ, ತಾಲೂಕು, ನಗರಸಭೆ, ತಾಲೂಕು ಪಂಚಾಯಿತಿ, ಎಲ್ಲಾ ಜನಪ್ರತಿನಿಧಿಗಳು, ಗಣ್ಯರಿಗೆ, ಗೌರವ ರಕ್ಷೆ ಕ್ರಮಬದ್ಧವಾಗಿ ಎಲ್ಲಾ ಅಧಿಕಾರಿಗಳು ಸಮಯಕ್ಕೆ ಪಾಲ್ಗೊಳ್ಳಬೇಕೆಂದು ಸಭೆ ನಿರ್ಧರಿಸಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಡಿ. ಭಜಂತ್ರಿ, ವಿಜಯ ರಂಗಾರೆಡ್ಡಿ, ಸಾಕ್ಷರ ಭಾರತ್ ಪ್ರೇಮಿ, ಸಾಮಾಜಿಕ ಕಾರ್ಯಕರ್ತ ಎ.ಅಬ್ದುಲ್ ನಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಉಷಾ, ತಾಲ್ಲೂಕು ಪಂಚಾಯತ್ ಅಲ್ಲಾಭಕ್ಷಿ, ಗ್ರೇಡ್ -2 ತಹಸೀಲ್ದಾರ್ ಬಿ. ಮಲ್ಲೇಶಪ್ಪ, ಉಪತಹಸೀಲ್ದಾರ್ ಶಶಿಕಾಂತ, ಕಂದಾಯ ಪರಿವೀಕ್ಷಕ ಎಸ್. ಮೊಹಮ್ಮದ್ ಸಾಧಿಕ್, ಸಮಾಜ ಕಲ್ಯಾಣ ಇಲಾಖೆಯ ಹುಲಿಗಪ್ಪ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿದರ್ೆಶಕ ವಿಶ್ವನಾಥ್, ನಗರಸಭೆಯ ಶೋಭಾ, ಅಬಕಾರಿ, ಲೋಕೋಪಯೋಗಿ, ಪೊಲೀಸ್, ಕೃಷಿ, ಆರೋಗ್ಯ, ಆಹಾರ, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಾಗಿ ಸಲಹೆ ಸೂಚನೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 