ಛತ್ರಪತಿ ಶಿವಾಜಿ ಜಯಂತಿ ಆಚರಣೆ
Chhatrapati Shivaji Jayanti celebration
ಕಾರವಾರ, ಫೆ.19 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಸಹಯೋಗದಲ್ಲಿ, ಕಾರವಾರದ ನಗರಸಭೆ ಉದ್ಯಾನವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಜಯಂತಿಯನ್ನು ಛತ್ರಪತಿ ಶಿವಾಜಿ ಪುತ್ಥಳಿಗೆ ಹಾರ ಹಾಕಿ ಹಾಗೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ ಉದ್ಘಾಟಿಸಿದರು.
ಶಿವಾಜಿ ಕುರಿತು ವಿಷೇಶ ಉಪನ್ಯಾಸ ನೀಡಿ ಕಮಲಾಕರ ವಿಶ್ವನಾಥ ಕಾಂಬ್ಳೆ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ತಾಯಿ ಜೀಜಾಬಾಯಿ, ರಾಜಕೀಯ ಗುರು ದಾದಾಜಿ ಕೊಂಡದೇವ ಅವರ ಮಾರ್ಗದರ್ಶನದಿಂದ ಅವರು ಹದಿನಾರನೇ ವಯಸ್ಸಿನಲ್ಲೇ ತೋರಣ ಕೋಟೆಯನ್ನು ಗೆಲ್ಲುವ ಮೂಲಕ ಸ್ವರಾಜ್ಯ ಸ್ಥಾಪನೆಗೆ ಮೊದಲ ಹೆಜ್ಜೆ ಇಟ್ಟರು. ನಂತರ ಬಿಜಾಪುರ ಸುತ್ತ ಮುತ್ತಲಿನ ಕೋಟೆ, ಓರಂಗಜೇಬು ಅವರ ಕೋಟೆಗಳನ್ನು ವಶ ಪಡಿಸಿಕೊಂಡನು. ಶಿವಾಜಿ ಅವರನ್ನು ಗೆಲುವಿನ ರಾಜ ಎಂದು ಕರೆಯಲಾಗುತ್ತದೆ.
ಭಾರತದ ಸಂಸ್ಕೃತಿ , ಪಂರಂಪರೆ ಮತ್ತು ಮೌಲ್ಯಗಳನ್ನು ಉಳಿಸುವಲ್ಲಿ ಶಿವಾಜಿಯ ಕೊಡುಗೆ ಆಪಾರ. ದೇಶದಲ್ಲಿ ಮೊದಲ ನೌಕಾಸೇನೆ ಕಟ್ಟಿದ್ದು, ಮುಂದಾಲೋಚನೆ ಹಾಗೂ ರಾಜಕೀಯ ತಂತ್ರದಲ್ಲಿ ಚಾಣಕ್ಷನಾಗಿದ್ದರು. ಅವರ ನಡೆದು ಬಂದ ದಾರಿ ಮತ್ತು ಮಾರ್ಗಗಳು ನಮ್ಮಗೆಲ್ಲ ಪ್ರೇರಣೆಯಾಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತರಬೇತಿ ನಿರತ ಐಎಎಸ್ ಅಧಿಕಾರಿ ಝೂಪಿಷನ್ ಹಕ್, ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆಯ ತಹಶೀಲ್ದಾರ ಪ್ರಮೋದ ನಾಯ್ಕ, ಕೊಂಕಣ ಮರಾಠ ಸಂಘದ ಅಧ್ಯಕ್ಷ ಗಜಾನನ ರಾಣೆ, ನಗರಸಭೆ ಅಧಿಕಾರಿ ಸಿಬ್ಬಂದಿಗಳು, ಮರಾಠಿ ಸಮುದಾಯದವರು ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ನಾಯ್ಕ ಸ್ವಾಗತಿಸಿದರು. ನಯನಾ ಮಧುಕರ್ ನಾಯ್ಕ ನಿರೂಪಿಸಿ, ವಂದಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 