ಬಿಜೆಪಿ ತಿರಸ್ಕರಿಸಲು ಚಿದಂಬರಂ ಮನವಿ
Chidambaram
ನವದೆಹಲಿ, ನ 30- ದೇಶದ ಆರ್ಥಿಕ ಪರಿಸ್ಥಿತಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ದಿನೇ ದಿನೇ ಕುಸಿಯುತ್ತಿದ್ದು, ಸರಿಪಡಿಸಲಾಗದಷ್ಟು ಅಧೋಗತಿಗೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತ ಜಾರ್ಖಂಡ್ ಮತದಾರರು ಬಿಜೆಪಿಯನ್ನು ತಿರಸ್ಕರಿಸಬೇಕೆಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಜನರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಅವರ ಪರವಾಗಿ ಸರಣಿ ಟ್ವೀಟ್ ಮಾಡಲಾಗಿದ್ದು, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಮೋದಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು, ಜಾರ್ಖಂಡ್ ಜನರಿಗೆ ಇದಕ್ಕಿಂತ ಉತ್ತಮ ಅವಕಾಶ ದೊರೆಯುವುದಿಲ್ಲ ಎಂದಿದ್ದಾರೆ.
ಕಳೆದ ಐದಾರು ವರ್ಷಗಳಿಂದಲೂ ಜಿಡಿಪಿ ಕುಸಿಯುತ್ತಲೇ ಬಂದಿದೆ. ಈಗ ಎರಡನೇ ತ್ರೈಮಾಸಿಕ ಅವಧಿಯಲ್ಲೂ ಒಟ್ಟು ಆಂತರಿಕ ಉತ್ಪನ್ನ ಶೇ 4.5 ಕ್ಕೆ ಕುಸಿದಿದೆ. ಮುಂದೆಯೂ ಕೂಡ ಆರ್ಥಿಕ ಪರಿಸ್ಥಿತಿಯ ಚೇತರಿಕೆಯ ಲಕ್ಷಣ ಕಾಣುತ್ತಿಲ್ಲ. ಆದರೂ ಸರ್ಕಾರ ಎಲ್ಲವೂ ಸರಿ ಇದೆ ಎಂದು ಹೇಳುತ್ತಿದೆ.
ಸರ್ಕಾರ ಕೈಗೊಂಡ ಕ್ರಮಗಳು ಯಾವುದೇ ಫಲಕೊಡುತ್ತಿಲ್ಲ. ಇಂತಹ ಸನ್ನಿವೇಶದಲ್ಲಿ ಜನರು ಜಾಗರೂಕರಾಗಿ ಬಿಜೆಪಿಯನ್ನು ತಿರಸ್ಕರಿಸಲು ಗಟ್ಟಿ ಮನಸ್ಸು ಮಾಡಬೇಕು ಎಂದು ಚಿದಂಬರಂ ಟ್ವೀಟ್ ಮೂಲಕ ಜನರಿಗೆ ಮನವಿ ಮಾಡಿಕೊಂಡಿದ್ದಾರೆ. ಜಾರ್ಖಂಡ್ ವಿಧಾನಸಭೆಗೆ ಶನಿವಾರದಿಂದ ಐದು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 