ಬಿಜೆಪಿ ತಿರಸ್ಕರಿಸಲು ಚಿದಂಬರಂ ಮನವಿ
Chidambaram
ನವದೆಹಲಿ, ನ 30- ದೇಶದ ಆರ್ಥಿಕ ಪರಿಸ್ಥಿತಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ದಿನೇ ದಿನೇ ಕುಸಿಯುತ್ತಿದ್ದು, ಸರಿಪಡಿಸಲಾಗದಷ್ಟು ಅಧೋಗತಿಗೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತ ಜಾರ್ಖಂಡ್ ಮತದಾರರು ಬಿಜೆಪಿಯನ್ನು ತಿರಸ್ಕರಿಸಬೇಕೆಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಜನರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಅವರ ಪರವಾಗಿ ಸರಣಿ ಟ್ವೀಟ್ ಮಾಡಲಾಗಿದ್ದು, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಮೋದಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು, ಜಾರ್ಖಂಡ್ ಜನರಿಗೆ ಇದಕ್ಕಿಂತ ಉತ್ತಮ ಅವಕಾಶ ದೊರೆಯುವುದಿಲ್ಲ ಎಂದಿದ್ದಾರೆ.
ಕಳೆದ ಐದಾರು ವರ್ಷಗಳಿಂದಲೂ ಜಿಡಿಪಿ ಕುಸಿಯುತ್ತಲೇ ಬಂದಿದೆ. ಈಗ ಎರಡನೇ ತ್ರೈಮಾಸಿಕ ಅವಧಿಯಲ್ಲೂ ಒಟ್ಟು ಆಂತರಿಕ ಉತ್ಪನ್ನ ಶೇ 4.5 ಕ್ಕೆ ಕುಸಿದಿದೆ. ಮುಂದೆಯೂ ಕೂಡ ಆರ್ಥಿಕ ಪರಿಸ್ಥಿತಿಯ ಚೇತರಿಕೆಯ ಲಕ್ಷಣ ಕಾಣುತ್ತಿಲ್ಲ. ಆದರೂ ಸರ್ಕಾರ ಎಲ್ಲವೂ ಸರಿ ಇದೆ ಎಂದು ಹೇಳುತ್ತಿದೆ.
ಸರ್ಕಾರ ಕೈಗೊಂಡ ಕ್ರಮಗಳು ಯಾವುದೇ ಫಲಕೊಡುತ್ತಿಲ್ಲ. ಇಂತಹ ಸನ್ನಿವೇಶದಲ್ಲಿ ಜನರು ಜಾಗರೂಕರಾಗಿ ಬಿಜೆಪಿಯನ್ನು ತಿರಸ್ಕರಿಸಲು ಗಟ್ಟಿ ಮನಸ್ಸು ಮಾಡಬೇಕು ಎಂದು ಚಿದಂಬರಂ ಟ್ವೀಟ್ ಮೂಲಕ ಜನರಿಗೆ ಮನವಿ ಮಾಡಿಕೊಂಡಿದ್ದಾರೆ. ಜಾರ್ಖಂಡ್ ವಿಧಾನಸಭೆಗೆ ಶನಿವಾರದಿಂದ ಐದು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 