ಐಎನ್ಎಕ್ಸ್ ಮೀಡಿಯಾ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಚಿದಂಬರಂ
ನವದೆಹಲಿ, ಅ 3 (ಯುಎನ್ಐ) ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜೈಲು ಸೇರಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಗುರುವಾರ ಸುಪ್ರೀಂಕೋರ್ಟ್ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣಾ ಮುರಾರಿ ಅವರನ್ನು ಒಳಗೊಂಡ ಪೀಠದ ಮುಂದೆ ಕಾಂಗ್ರೆಸ್ ನಾಯಕ್ ಚಿದಂಬರಂ ಅವರ ಪರ ವಕೀಲ ಕಪಿಲ್ ಸಿಬಲ್ ವಿಷಯ ಪ್ರಸ್ತಾಪಿಸಿದರು. ಆದಾಗ್ಯೂ, ಈ ನ್ಯಾಯಾಧೀಶರು ಈ ಅರ್ಜಿಯನ್ನು ನಿಗದಿತ ಪಟ್ಟಿಗಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಕಳುಹಿಸಿತು. ದೆಹಲಿ ಹೈಕೋರ್ಟ್ ಸೋಮವಾರ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಳ್ಳಿಹಾಕಿತ್ತು. ಮಾಜಿ ಹಣಕಾಸು ಸಚಿವರು ಸೆಪ್ಟಂಬರ್ 5ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಸೆಪ್ಟಂಬರ್ 19ರಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 3ರವರೆಗೆ ವಿಸ್ತರಿಸಿತ್ತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 