ಪಿ ಎಂ ಕೇರ್ಸ್ ನಿಧಿ ಹಂಚಿಕೆಗೆ ಚಿದಂಬರಂ ಅನುಮಾನ
ನವದೆಹಲಿ, ಮೇ 13, ಪಿ ಎಂ ಕೇರ್ಸ್ ನಿಧಿಯಿಂದ ವಲಸೆ ಕಾರ್ಮಿಕರಿಗೆ ಹಂಚಿಕೆ ಮಾಡಿರುವ 1, 000 ಕೋಟಿ ರೂಪಾಯಿ ಅವರಿಗೆ ತಲುಪುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ. ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ವಲಸೆ ಕಾರ್ಮಿಕರಿಗೆ 1000 ಕೋಟಿ ರೂಪಾಯಿ ಹಣದಲ್ಲಿ ಅವರ ಕೈಗೆ ಸೇರುವುದು ಮಾತ್ರ ಶೂನ್ಯ ಎಂದಿದ್ದಾರೆ.
ದಯಮಾಡಿ ತಪ್ಪು ತಿಳಿಯಬೇಡಿ, ಈ ಹಣ ವಲಸೆ ಕಾರ್ಮಿಕರಿಗೆ ಬದಲಾಗಿ ರಾಜ್ಯ ಸರ್ಕಾರಗಳಿಗೆ ಹೋಗಲಿದೆ. ವಲಸೆ ಕಾರ್ಮಿಕರ ಪ್ರಯಾಣ ಖರ್ಚು, ವಸತಿ, ಔಷಧಿ, ಆಹಾರ ಇತರ ವೆಚ್ಚಗಳನ್ನು ಭರಿಸಲು ರಾಜ್ಯ ಸರ್ಕಾರಗಳಿಗೆ ಈ ಹಣ ಹೊಂದಿಸಲಾಗುತ್ತದೆಯೇ ಹೊರತು ವಲಸೆ ಕಾರ್ಮಿಕರ ಕೈಗಳಿಗೆ ಹಣ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆಎಲ್ಲ ಆದಾಯ ಮಾರ್ಗಗಳನ್ನು ಮುಚ್ಚಿಬಿಟ್ಟರೆ ವಲಸೆ ಕಾರ್ಮಿಕರು ಬದುಕು ಸಾಗಿಸುವುದಾದರೂ ಹೇಗೆ? ಎಲ್ಲ ಅಡತಡೆಗಳನ್ನು ದಾಟಿ ತಮ್ಮ ಹಳ್ಳಿಗಳಿಗೆ ವಾಪಸ್ ಹೋಗಿರುವ ವಲಸೆ ಕಾರ್ಮಿಕನಿಗೆ ಗ್ರಾಮದಲ್ಲಿ ಉದ್ಯೋಗ ಲಭಿಸುವುದಿಲ್ಲ. ಇದರಿಂದ ಆದಾಯ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಆ ಕಾರ್ಮಿಕ ತನ್ನ ಕುಟುಂಬವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂದು ಚಿದಂಬರಂ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 