ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ
ಬೆಂಗಳೂರು, ಜೂ.26, ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟ್ ಮಾಡಿ, ಮಾದಕ ವಸ್ತುಗಳ ವ್ಯಸನ ಕೇವಲ ವ್ಯಕ್ತಿತ್ವಕ್ಕಷ್ಟೇ ಅಲ್ಲದೇ ಇಡೀ ಸಮಾಜದ ಸ್ವಾಸ್ಥ್ಯಕ್ಕೆ ದೊಡ್ಡ ಬೆದರಿಕೆಯಾಗಿದೆ. ಕೌಟುಂಬಿಕ ಬದುಕನ್ನೇ ನಾಶ ಮಾಡುವ ಮಾದಕ ವಸ್ತುಗಳ ವ್ಯಸನ ಮತ್ತು ಸಾಗಾಣಿಕೆಯ ದುಷ್ಪರಿಣಾಮ ಕುರಿತು ಅರಿವು ಮೂಡಿಸೋಣ ಎಂದು ಕರೆ ನೀಡಿದ್ದಾರೆ.ಮಾದಕ ವಸ್ತುಗಳ ವ್ಯಸನದ ಪಿಡುಗು ಮತ್ತು ಸಾಗಾಟದಂತಹ ಅಕ್ರಮಗಳಿಂದ ಸಮಾಜವನ್ನು ಮುಕ್ತಗೊಳಿಸಲು ಶ್ರಮಿಸೋಣ ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಮಾದಕ ವಸ್ತುಗಳ ವ್ಯಸನದಿಂದ ವ್ಯಕ್ತಿತ್ವವಷ್ಟೇ ಅಲ್ಲದೆ ಇಡೀ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಸಮಾಜವನ್ನು ಮಾದಕ ವಸ್ತುಗಳ ವ್ಯಸನ ಮತ್ತು ಸಾಗಾಟದ ಪಿಡುಗುಗಳಿಂದ ಮುಕ್ತಗೊಳಿಸಲು ಕೈಜೋಡಿಸೋಣ ಎಂದು ಮನವಿ ಮಾಡಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 