ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ಗೆ ಮುಖ್ಯಮಂತ್ರಿ ಶ್ರದ್ಧಾಂಜಲಿ
ನವದೆಹಲಿ, ಆಗಸ್ಟ್ 7 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರಕ್ಕೆ ಇಂದು ಅಂತಿಮ ನಮನ ಸಲ್ಲಿಸಿದರು.
ಸುಷ್ಮಾ ಸ್ವರಾಜ್ ಅವರು ಉತ್ತಮ ವಾಗ್ಮಿ ಹಾಗೂ ಅಸಾಧಾರಣ ನಾಯಕತ್ವದ ಗುಣ ಹೊಂದಿದ್ದರು. ಭಾರತದ ವಿದೇಶಾಂಗ ಸಚಿವೆಯಾಗಿ ಅದ್ವಿತೀಯ ಸೇವೆ ಸಲ್ಲಿಸಿದ್ದ ಅವರು ಇಂದಿರಾ ಗಾಂಧಿಯ ನಂತರ ಈ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆಯಾಗಿದ್ದರು. ಸಂಕಷ್ಟದಲ್ಲಿರುವ ಜನರ ನೆರವಿಗೆ ಸ್ವಯಂ ಪ್ರೇರಣೆಯಿಂದ ಧಾವಿಸುತ್ತಿದ್ದ ಕಾರಣ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ವಿದೇಶಿ ಮಾಧ್ಯಮಗಳೂ ಅವರನ್ನು ಅತ್ಯಂತ ಜನಪ್ರಿಯ ವಿದೇಶಾಂಗ ಸಚಿವೆ ಎಂದು ಬಣ್ಣಿಸಿದ್ದವು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಸುಷ್ಮಾ ಅವರಿಗೆ ಕರ್ನಾಟಕದೊಂದಿಗೆ ಇದ್ದ ಅವಿನಾಭಾವ ಸಂಬಂಧವನ್ನು ಸ್ಮರಿಸಿಕೊಂಡಿರುವ ಮುಖ್ಯಮಂತ್ರಿಗಳು, ಬಳ್ಳಾರಿಯಲ್ಲಿ 1999ರಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ದಿಸಿದಾಗಿನ ಒಡನಾಟ, ನಂತರ ಸುಮಾರು ಹತ್ತು ವರ್ಷಗಳ ಕಾಲ ಪ್ರತಿ ವರಮಹಾಲಕ್ಷ್ಮಿ ಹಬ್ಬಕ್ಕೆ ಬಳ್ಳಾರಿಗೆ ಆಗಮಿಸುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
ಕನ್ನಡದಲ್ಲೇ ಮಾತನಾಡುತ್ತ, ಜನರಲ್ಲಿ ಒಂದಾಗಿ ಬೆರೆಯುವ ಅವರ ಸ್ವಭಾವ ಅನುಸರಣೀಯ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 