ಉಡುಪಿಯಲ್ಲಿ 250 ಬೆಡ್ಗಳ ಆಸ್ಪತ್ರೆಗೆ ಮುಂದಿನ ಸಾಲಿನಲ್ಲಿ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಮಾ.19, ಉಡುಪಿ ಜಿಲ್ಲೆಯಲ್ಲಿ 250 ಬೆಡ್ಗಳ ಜಿಲ್ಲಾಸ್ಪತ್ರೆ ನಿರ್ಮಿಸಲು ಮುಂದಿನ ಸಾಲಿನಲ್ಲಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ವಿಧನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಶಾಸಕರಾದ ರಘುಪತಿ ಭಟ್ ಮತ್ತು ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಲವು ವರ್ಷಗಳಿಂದ ಉಡುಪಿಗೆ 250 ಬೆಡ್ಗಳ ಆಸ್ಪತ್ರೆ ನಿರ್ಮಾಣದ ಬೇಡಿಕೆ ಇದೆ. ಮುಂದಿನ ಸಾಲಿನಲ್ಲಿ ಇದನ್ನು ಜಾರಿಗೊಳಿಸಲಾಗುವುದು ಎಂದರು.
ಇದಕ್ಕೂ ಮೊದಲು ಶಾಸಕರಾದ ರಘುಪತಿ ಭಟ್ ಮತ್ತು ಸುನೀಲ್ ಕುಮಾರ್, ಉಡುಪಿ ಜಿಲ್ಲೆ ಘೋಷಣೆಯಾಗಿ ಹಲವು ವರ್ಷಗಳು ಕಳೆದಿದ್ದರೂ ಅಲ್ಲಿನ ತಾಲೂಕು ಆಸ್ಪತ್ರೆಯ ಬೋರ್ಡ್ ಮಾತ್ರ ಬದಲಾಯಿಸಿ ಜಿಲ್ಲಾ ಆಸ್ಪತ್ರೆ ಎಂದು ಘೋಷಿಸಲಾಗಿದೆ. ಆದರೆ ಸಿಬ್ಬಂದಿ ಮತ್ತು ವೈದ್ಯರನ್ನು ಜಿಲ್ಲಾ ಆಸ್ಪತ್ರೆಗೆ ಅನುಗುಣವಾಗಿ ಕೊಟ್ಟಿಲ್ಲ. ಈ ಹಿಂದಿನ ಆರೋಗ್ಯ ಸಚಿವರು ಕೂಡ ಈ ಬೇಡಿಕೆಯನ್ನು ಈಡೇರಿಸಿಲ್ಲ. ಈ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಬಜೆಟ್ನಲ್ಲಿಯೇ ಇದನ್ನು ಘೋಷಿಸಬೇಕು ಎಂದು ಮನವಿ ಮಾಡಿದ್ದೆವು. ಆದರೆ ಈಡೇರಿಲ್ಲ. ಈಗಲಾದರೂ ಮುಖ್ಯಮಂತ್ರಿ ಬೇಡಿಕೆ ಈಡೇರಿಸಬೇಕು ಎಂದು ಮನವಿ ಮಾಡಿದರು. ಆರೋಗ್ಯ ಸಚಿವ ಬಿ.ಶ್ರೀರಾಮುಲು ಉತ್ತರಿಸಿ, ತಾವು ಉಡುಪಿಗೆ ಭೇಟಿ ನೀಡಿದಾಗ ಸ್ಥಳೀಯ ಶಾಸಕರನ್ನು ಭೇಟಿ ಮಾಡಿ ಈ ವಿಷಯದಲ್ಲಿ ಚರ್ಚಿಸಿದ್ದೇನೆ. ಮೊದಲ ಹಂತದಲ್ಲಿ ವೈದ್ಯರು ಮತ್ತು ನರ್ಸ್ಗಳ ನೇಮಕಾತಿ ಪ್ರಸ್ತಾಪವನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ. ಅನುಮತಿ ಸಿಕ್ಕಿದ ತಕ್ಷಣ ವೈದ್ಯರು ಮತ್ತು ನರ್ಸ್ಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 