ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಚಿಕ್ಕಣ್ಣನವರ ಮನವಿ
ಲೋಕದರ್ಶನವರದಿ
ಬ್ಯಾಡಗಿ18: ಗ್ರಾಹಕರ ಹಿತ ದೃಷ್ಠಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಥಳೀಯ ಶಾಖಾ ಕಚೇರಿಯನ್ನು ಈಗಿರುವ ಕಟ್ಟಡದಿಂದ ಬೇರೆಡೆ ವಿಶಾಲವಾದ ಜಾಗವಿರುವ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ರಾಜ್ಯ ಭ್ರಷ್ಟಾಚಾರ ವಿರೋಧಿ ಜನ ಆಂದೋಲನ (ನ್ಯಾಸ) ಮುಖ್ಯ ಸಂಚಾಲಕ ಮಲ್ಲೇಶಪ್ಪ ಚಿಕ್ಕಣ್ಣನವರ ಬ್ಯಾಂಕಿನ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದ್ದಾರೆ.
ಈ ಕುರಿತು ಬ್ಯಾಂಕಿನ ಬೆಂಗಳೂರು ಮತ್ತು ದಾವಣಗೆರೆಯ ಹಿರಿಯ ಅಧಿಕಾರಿಗಳಿಗೆ ಹಾಗೂ ಹಾವೇರಿಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರದ ಮೂಲಕ ಒತ್ತಾಯಿಸಿರುವ ಅವರು ಸದ್ಯ ಮುಖ್ಯ ರಸ್ತೆಯಲ್ಲಿರುವ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗಿದೆ. ಕಾರಣ ಹಿಂದೆ ಎರಡು ಶಾಖೆಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಸ್.ಬಿ.ಎಂ. ಹಾಗೂ ಎಸ್.ಬಿ.ಐ. ವಿಲೀನವಾದ ನಂತರ ಗ್ರಾಹಕರ ಸಂಖ್ಯೆಯು ಹೆಚ್ಚಾಗಿ ಸಮರ್ಪಕವಾಗಿ ಸೇವೆ ದೊರಕುವುದು ದುಸ್ತರವಾಗಿದೆ. ಅದರಲ್ಲೂ ಮುಖ್ಯ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿರುವುದರಿಂದ ಬ್ಯಾಂಕಿಗೆ ಬರುವ ಗ್ರಾಹಕರು ಪರದಾಡುವಂತಾಗಿದೆ. ವಾಹನಗಳ ದಟ್ಟಣೆಯಿಂದ ಸಂಚಾರಕ್ಕೆ ಕೂಡ ಬಹಳಷ್ಟು ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ.
ಗ್ರಾಹಕರಿಗೆ ಭಾಷೆಯ ಗೊಂದಲ...!!!
ಮುಖ್ಯವಾಗಿ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಪ್ರಮುಖ ಸಮಸ್ಯೆಯೊಂದು ತೀವ್ರವಾಗಿ ಕಾಡುತ್ತಿದೆ. ಅದುವೇ ಬ್ಯಾಂಕಿನಲ್ಲಿ ಕಾರ್ಯ ನಿರ್ವಹಿಸುವ ನೌಕರರ ಭಾಷೆಯ ಗೊಂದಲದಿಂದ ಗ್ರಾಹಕರು ಪರದಾಡುತ್ತಿರುವಂತಾಗಿದ್ದು, ಈ ಬಗ್ಗೆ ಗಮನ ಹರಿಸಿ ಕನ್ನಡ ಭಾಷಾ ಜ್ಞಾನವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬ್ಯಾಂಕಿಗೆ ವಗರ್ಾಯಿಸಬೇಕು ಎಂದು ಅವರು ಮನವಿ ಪತ್ರದ ಮೂಲಕ ಹಿರಿಯ ಅಧಿಕಾರಿಗಳನ್ನು ಆಗ್ರಹ ಪಡಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 