ಚಿಕುನ್ಗುನ್ಯಾ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಂದ ಪರಿಶೀಲನೆ
ವಿಜಯಪುರ 31: ವಿಜಯಪುರ
ತಾಲೂಕಿನ ನಾಗರಾಳ ಗ್ರಾಮದಲ್ಲಿ ಚಿಕುನಗುಣ್ಯಾ ಪ್ರಕರಣ ಕಂಡು ಬಂದ ಹಿನ್ನೆಲಯಲ್ಲಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಹೇಂದ್ರ ಕಾಪ್ಸೆ,
ಡಾ.ಗುಣಾರಿ, ಡಾ.ಕೆ.ಡಿ.ಗುಂಡಬಾವಡಿ ಅವರು ಸದರಿ ಗ್ರಾಮಕ್ಕೆ
ಬುಧವಾರ ಭೇಟಿ ನೀಡಿ ಪರಿಶೀಲನೆ
ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಪಿಡಿಓಗಳು ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಅದರಂತೆ ನೀರಿನ ಮೂಲಗಳಿಗೆ ವಾರಕ್ಕೊಮ್ಮೆ ಕ್ಲೋರಿನೇಶನ್ ಮಾಡಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳು ಸೂಚನೆ ನೀಡಿದರು.
ಡಾ.ಕೆ.ಡಿ.ಗುಂಡಬಾವಡಿ ಅವರು, ಚಿಕುನಗುಣ್ಯಾ ರೋಗ ತಡೆಗಟ್ಟಲು ಸಾರ್ವಜನಿಕರು
ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು
ಸ್ವಚ್ಛವಾಗಿಟ್ಟುಕೊಳ್ಳಬೇಕು.
ಸುತ್ತಮುತ್ತ ನೀರು ಕೊಳಚೆಯಾಗದಂತೆ ನೋಡಿಕೊಳ್ಳಬೇಕು.
ಮನೆಯಲ್ಲಿ ಶೇಖರಿಸಿದ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಪಾತ್ರೆಗಳನ್ನು
ತೊಳೆದು ಮತ್ತೆ ನೀರು ತುಂಬಬೇಕು. ಚಿಕುನಗುನ್ಯಾ
ಸೊಳ್ಳೆಗಳಿಂದ ಹರಡುವ ರೋಗವಾಗಿದ್ದು,ಎಲ್ಲಿಯೂ ಕಲುಷಿತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು
ಎಂದು ಹೇಳಿದರು.
ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ-ಮನೆಗೆ ತೆರಳಿ
ಚಿಕುನಗುನ್ಯಾ ರೋಗದ ಕುರಿತು ತಿಳುವಳಿಕೆ
ನೀಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 