ಬಾಲ್ಯ ವಿವಾಹ ಮುಕ್ತ ಕೊಪ್ಪಳ ,ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ"
Child marriage free Koppal, jatha and awareness program
ಕೊಪ್ಪಳ 22: ಜಿಲ್ಲೆಯಾದ್ಯಂತ ಬಾಲ್ಯ ವಿವಾಹ ಮುಕ್ತ ಕೊಪ್ಪಳ ಮಾಡಬೇಕೆಂದು ಮಾನ್ಯ ಜಿಲ್ಲಾದಿಕಾರಿಗಳ ಆದೇಶದಂತೆ ಹಿಡಿ ಜಿಲ್ಲೆಯಾದ್ಯಂತ ಜಾಥಾಕ್ಕೆ ಈ ಹಿಂದೆ ತಯಾರಿ ಕುರಿತು ಸಭೆ ನಡೆಸಿ ಗ್ರಾಮ ಪಂಚಾಯತ್ ಗಳಲ್ಲಿ ನಡೆಸಲು ಅದರಂತೆ ಸ್ಥಳಿಯ ಸಹಭಾಗಿತ್ವದಲ್ಲಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಇಂದು ತಾಲ್ಲೂಕಿನ ಓಜನಳ್ಳಿ ಗ್ರಾಮ ಪಂಚಾಯತಿಯಲ್ಲಿ ಜಾಥಾ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಡಾ ರಾಮಾಂಜನೇಯ ,ಹಾಗೂ ಭಾಗ್ಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಶ್ರೀಮತಿ ರೋಸ್ ಹನ್ನ ,ಆರೋಗ್ಯ ನೀರೀಕ್ಷಣಾಧಿಕಾರಿಯಾದ ಜಿ ಗೊವಿಂದಪ್ಪ ಅಂಗನವಾಡಿ ಮೇಲ್ವಿಚಾರಕಿ ಶ್ರಿಮತಿ ಲಕ್ಷ್ಮೀ ರೆಡ್ಡಿ ಏಊಕಖಿ ್ಘ ಸ್ಪಂದನ ಸಂಸ್ಥೆಯ ಸಿಬ್ಬಂದಿಗಳು ಸಂಜೀವಿನಿ ಒಕ್ಕೂಟ ಮತ್ತು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಕಾರ್ಯದರ್ಶಿಗಳು ಊರಿನ ಮಹಿಳೆಯರು ಭಾಗವಹಿಸಿ ಓಣಿಗಳಲ್ಲಿ ಬೀದಿಗಳಲ್ಲಿ ಘೋಷಣೆ ಕೂಗುತ್ತಾ ಬಾಲ್ಯ ವಿವಾಹ ತಡೆ ಕುರಿತು ಘೋಷಣೆಗಳ ಮೂಲಕ ಜಾಥಾ ನಡೆಸಿ ಗ್ರಾಮ ಪಂಚಾಯತ್ ನಿಂದ ಪ್ರಾರಂಭವಾಗಿ ಮತ್ತು ಗ್ರಾಮ ಪಂಚಾಯತಿಗೆ ಬಂದು ಜಾಥಾ ಮುಕ್ತಾಯ ಮಾಡಲಾಯಿತು ಊರಿನ ಹೆಣ್ಣು ಮಕ್ಕಳು ಕಿಶೋರಿಯರು ಸಹ ಭಾಗವಹಿಸಿ ಯಶಸ್ವಿಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 