ಬಳ್ಳಾರಿ ಮತ್ತು ವಿಜಯನಗರ ಗ್ರಾಮೀಣ ಪ್ರತಿಭೆಗೆ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕಾರ
Children's Literature Award for rural talent from Bellary and Vijayanagar
ವಿಜಯನಗರ 15: ಗ್ರಾಮೀಣ ಪ್ರತಿಭೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕಾರ ದೊರತಿರುವುದು ಅಖಂಡ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಖ್ಯಾತ ನ್ಯಾಯವಾದಿ ಹೆಚ್.ಪಿ. ಕಲ್ಲಂಭಟ್ಞ ತಿಳಿಸಿದರು.
ಕ.ಸಾ.ಪ ಅಖಂಡ ಬಳ್ಳಾರಿ ಜಿಲ್ಲಾಘಟಕ ಮತ್ತು ಹೊಸಪೇಟೆಯ ವಿಜಯನಗರ ಕಾಲೇಜು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಡಾ. ಕೆ ಶಿವಲಿಂಗಪ್ಪ ಹಂದಿಹಾಳು ಅವರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ, ಅಖಂಡ ಬಳ್ಳಾರಿ ಜಿಲ್ಲೆಗೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿಯನ್ನು ತಂದು ಕೊಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಮಕ್ಕಳ ಸಾಹಿತಿಡಾ. ಕೆ.ಶಿವಲಿಂಗಪ್ಪ ಹಂದಿ ಹಾಳು ಅಭಿನಂದನೀಯರು ಎಂದು ಹೆಚ್.ಪಿ.ಕಲ್ಲಂಭಟ್ಞ ನುಡಿದರು.
ಡಾ. ಕೆ.ಶಿವಲಿಂಗಪ್ಪ ಹಂದಿಹಾಳು ಅವರನ್ನು ಅಭಿನಂದಿಸಿ ಮಾತನಾಡಿದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ನಿರ್ದೇಶಕರಾದಡಾ.ತಿಪ್ಪೇರುದ್ರ ಸಂಡೂರು ಅವರು, ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶಿವಲಿಂಗಪ್ಪನವರು ತಮ್ಮ ’ನೋಟ್ ಬುಕ್’ ಕೃತಿಯ ಮೂಲಕ ಕನ್ನಡ ನಾಡಿಗೆಕೇಂದ್ರ ಸಾಹಿತ್ಯಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ದೊರಕಿಸಿ ಕೊಟ್ಟಿರುವುದಕ್ಕಾಗಿ ಅವರನ್ನು ಅಭಿನಂದಿಸಲು ಸಂತಸ ವೆನಿಸುತ್ತದೆ ಎಂದರು. ಕಸಾಪ ಅಖಂಡ ಬಳ್ಳಾರಿ ಜಿಲ್ಲಾಘಟಕ ಮತ್ತು ವಿಜಯನಗರ ಕಾಲೇಜು ಹೊಸಪೇಟೆ ಇವರು ನನ್ನ ನೋಟ್ ಬುಕ್ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತ ಶುಭ ಸಂದರ್ಭದಲ್ಲಿ ನನ್ನನ್ನು ಆತ್ಮೀಯವಾಗಿ ಅಭಿನಂದಿಸುತ್ತಿರುವುದು ನನಗೆ ಸಂತೋಷವನ್ನುಂಟು ಮಾಡಿದೆ ಜೊತೆಗೆ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಡಾ. ಕೆ ಶಿವಲಿಂಗಪ್ಪ ಹಂದಿಹಾಳು ತಿಳಿಸಿದರು. ವಿಜಯನಗರ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದಡಾ ಕೆ. ಮಲ್ಲಿಕಾರ್ಜುನ ಗೌಡ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ತಮ್ಮ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸದಾ ಸಹಕಾರ ನೀಡುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಕರುನಾಡ ಕಲಿಗಳ ಕ್ರಿಯಾ ಸಮಿತಿ ಅಧ್ಯಕ್ಷ ಗುಜ್ಜಲ ಗಣೇಶ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿಗಳಾದ ಪ್ರಕಾಶ್, ಉಮಾ ಮಹೇಶ್ವರ, ಮರಿಯಮ್ಮನಹಳ್ಳಿ ಹೋಬಳಿ ಅಧ್ಯಕ್ಷರಾದ ಬಿ.ಎಂ.ಎಸ್. ಮೃತ್ಯುಂಜಯಸ್ವಾಮಿ,
ಡಾ. ಶಿವಕುಮಾರ್ ಸಾತ್ಮಾರ್, ಕವಿಯತ್ರಿ ನೂರ್ಜಹಾನ್, ವಿಶಾಲ್ ಮ್ಯಾಸರ್ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನಉಪನ್ಯಾಸಕಿ ಭಾರತಿ ಮಲ್ಲಿಕಾರ್ಜುನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಡಾ.ಗಾದೆಪ್ಪ ವಂದನಾರೆ್ಣ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 