ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು! ಪಾಲಕರು ಮಕ್ಕಳನ್ನು ಅನುಸರಣೆ ಮಾಡಿ : ಶಾಸಕ ಪಠಾಣ
Children are falling prey to addiction! Parents should follow their children: MLA Pathana
ಶಿಗ್ಗಾವಿ 23 : ಇಂದಿನ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ ಆದ್ದರಿಂದ ಪಾಲಕರು ಮಕ್ಕಳನ್ನು ಅನುಸರಣೆ ಮಾಡಬೇಕು ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು. ತಾಲೂಕಿನ ಲಕ್ಕಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮೊದಲಿಗೆ ಮಕ್ಕಳು ತಂದೆ ತಾಯಿಗಳ ಮಾತನ್ನು ಯಥಾವತ್ತಾಗಿ ಕೇಳುತ್ತಿದ್ದರು ಆದರೆ ಇಂದು ಪಾಲಕರ ಪೋಷಕರ ಮಾತು ಕೇಳುವುದು ಕಷ್ಷವಾಗಿದೆ ಕಾರಣ ಸ್ವತಂತ್ರವಾಗಿ ಇರಬೇಕು ಯಾರ ಮಾತು ಕೇಳಬಾರದು ಎಂಬ ಮನೋಭಾವನೆಗೆ ಒಳಗಾಗಿದ್ದಾರೆ ಆದ್ದರಿಂದ ಮಕ್ಕಳಿಗೋಸ್ಕರ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ತಾಲೂಕಿನ ಕುರಬರ ಸಮಾಜದ ಅಧ್ಯಕ್ಷ ಚಂದ್ರಶೇಖರ ಮಾಯಣ್ಣವರ, ಗ್ರಾಮ ಪಂಚಾಯತ್ ಸದಸ್ಯ ಚನ್ನಮ್ಮ ರಾಗಿ, ಯಲ್ಲಪ್ಪ ಬಾಳಣ್ಣವರ, ನಿಂಗಪ್ಪ ಗೊರವರ, ನ್ಯಾಯವಾದಿ ಬಸವರಾಜ ರಾಗಿ , ಎಸ್ ಡಿಎಮ್ ಸಿ ಅಧ್ಯಕ್ಷ ಶಿವಪುತ್ರ್ಪ ಗೊರವರ ಸೇರಿದಂತೆ ಸದಸ್ಯರು ಹಾಗೂ ಶಿಕ್ಷಕರು, ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 