ಶೈಕ್ಷಣಿಕ ವರ್ಷ ಕಳೆದರೂ ಮಕ್ಕಳಿಗಿಲ್ಲ ಸಮವಸ್ತ್ರ
ಲೋಕದರ್ಶನ ವರದಿ
ಕೊಪ್ಪಳ 08: ಪ್ರಸಕ್ತ ಸಾಲಿನ ಎರಡನೇ ಜೊತೆ ಸಮವಸ್ತ್ರವನ್ನು ಸರಕಾರಿ ಶಾಲೆಯ ಮಕ್ಕಳಿಗೆ ಈ ವರೆಗೂ ಕೂಡಾ ಇಲಾಖೆಯಿಂದ ನೀಡದಿರುವದು, ಸರಕಾರಿ ಶಾಲೆಗಳಿಗೆ ರಾಜ್ಯ ಸರಕಾರವು ಮಾಡುತ್ತಿರುವ ಮಲತಾಯಿ ಧೋರಣೆ ಎಂದು ಆದರ್ಶ ಇಂಗ್ಲೀಷ್ ಮಾಧ್ಯಮ ಶಾಲೆ ಟಣಕನಕಲ್ ಎಸ್.ಡಿ.ಎಂ.ಸಿ ಸದಸ್ಯ ಜಗದೀಶ ಹೆಬ್ಬಳಿ ಇಲಾಖೆಯ ನಡೆಯನ್ನು ಖಂಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಕ್ಕಳಿಗೆ ಶಿಸ್ತಿನ ಪಾಠವನ್ನು ಹೇಳಿ ಕೊಡಬೇಕಾದ ಶಿಕ್ಷಣ ಇಲಾಖೆ, ಆರಂಭದ ಮೆಟ್ಟಿಲಾದ ಸಮವಸ್ತ್ರದ ಶಿಸ್ತು ಕಾಪಾಡುವಲ್ಲಿ ಇಲಾಖೆ ಮತ್ತು ಸರಕಾರವು ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಳೆದ ಜೂನ್ ತಿಂಗಳಿನಲ್ಲಿ ಕೇವಲ ಒಂದು ಜೊತೆ ಸಮವಸ್ತ್ರವನ್ನು ನೀಡಿರುವ ಸರಕಾರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರು ಈ ವರೆಗೂ ಎರಡನೇ ಜೊತೆ ಸಮವಸ್ತ್ರವನ್ನು ನೀಡಿಲ್ಲ, ಈ ರೀತಿಯ ಸರಕಾರ ಮತ್ತು ಇಲಾಖೆ ಮಾಡುವ ವೈಫಲ್ಯಗಳು ಮಕ್ಕಳ ಮನಸ್ಸಿನಲ್ಲಿ ಬೇರೆ ಬೇರೆ ಭಾವನೆಗಳು ಹುಟ್ಟುವಂತೆ ಮಾಡುತ್ತವೇ ಎಂದು ತಿಳಿಸಿದರು. ಮಂಜುನಾಥ ಮೇಟಿ, ಸುರೇಶ ಮಂಗಳೂರು, ವಿರುಪಾಕ್ಷಿ ಮುದ್ದಾಬಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 