ತಂದೆಯ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ಮಕ್ಕಳು
Children wrote exams despite father's death
ತಂದೆಯ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ಮಕ್ಕಳು
ರಾಣೆಬೆನ್ನೂರ 08: ತಂದೆಯ ಆಕಸ್ಮಿಕ ಸಾವಿನ ಮಧ್ಯೆಯೂ ಅಣ್ಣ- ತಂಗಿಯರಿಬ್ಬರು ಇತ್ತೀಚೆಗೆ ನಡೆದ ಎಸ್. ಎಸ್. ಎಲ್. ಸಿ, ಪರೀಕ್ಷೆಯ ಹಿಂದಿ ವಿಷಯವನ್ನು ಬರೆದ ಘಟನೆ ನಗರದಲ್ಲಿ ನಡೆದಿದೆ. ತಾಲೂಕಿನ ಪದ್ಮಾವತಿಪುರದ ಹನುಮಂತಪ್ಪ ಗುಡ್ಡಪ್ಪ ಲಮಾಣಿ( 46) ಎಂಬಾತನು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ. , ಬಿಇಓ ಮತ್ತಿತರರು ಮೃತನ ಮನೆಗೆ ತೆರಳಿ ಮಕ್ಕಳಿಗೆ ಸ್ಥೈರ್ಯ ತುಂಬಿ ಪರೀಕ್ಷೆ ಬರೆಯಲು ಹೇಳಿದರು. ಪರೀಕ್ಷೆಗೆ ಹೋಗಬೇಕೆನ್ನುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಸಂಬಂಧಿಕರು, ಗ್ರಾಮಸ್ಥರು ಮಕ್ಕಳಿಬ್ಬರಿಗೆ ಧೈರ್ಯ ಹೇಳಿ ಪರೀಕ್ಷೆ ಬರೆಯಲು ಮಾನಸಿಕವಾಗಿ ದೈರ್ಯ ತುಂಬಿದರು. ಮಗ ಧನರಾಜ್ ರಾಜೇಶ್ವರಿಯಲ್ಲಿ ಹಾಗೂ ಮಗಳು ರೋಟರಿ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆದರು. ಇನ್ನೋರ್ವ ಮಗ ಸಂತೋಷ್ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದು ಸಂಜೆ ವೇಳೆಗೆ ಮಕ್ಕಳ ಸಮ್ಮುಖದಲ್ಲಿ ಮೃತನ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 