ಅಯೋಧ್ಯೆಯ ಹನುಮಾನ್ ಗರ್ಹಿ ದೇಗಲದಲ್ಲಿ ಪೂಜೆ ಸಲ್ಲಿಸಿದ ಚಿನ್ಮಯಾನಂದ
ಆಯೋಧ್ಯಾ, ಫೆ 8, ಕಾನೂನು ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಆರೋಪಿಯಾಗಿ, ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ ಶನಿವಾರ ಹನುಮಾನ್ ಗರ್ಹಿ ದೇಗುಲಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.ಸ್ವಾಮಿ ಚಿನ್ಮಯಾನಂದ ಇಂದು ಬೆಳಗ್ಗೆ ಇಲ್ಲಿಗೆ ಆಗಮಿಸಿ, ಹನುಮಾನ್ ಗರ್ಹಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಲಕ್ನೋಗೆ ತೆರಳಿದರು.ದೇಗುಲದ ಬಳಿ ಮಾಧ್ಯಮ ಪ್ರತಿನಿಧಿಗಳನ್ನು ಭೇಟಿಯಾಗಲು ನಿರಾಕರಿಸಿದ ಮಾಜಿ ಕೇಂದ್ರ ಸಚಿವರು, ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ತೆರಳಿದರು. ಅತ್ಯಾಚಾರ ಪ್ರಕರಣದಲ್ಲಿ ಕಳೆದ ಐದು ತಿಂಗಳುಗಳಿಂದ ಜೈಲಿನಲ್ಲಿದ್ದ ಮಾಜಿ ಕೇಂದ್ರ ಸಚಿವರಿಗೆ ಗುರುವಾರ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು ಜೈಲಿನಿಂದ ಬಿಡುಗಡೆಯ ನಂತರ ಸ್ವಾಮಿ ಚಿನ್ಮಯಾನಂದ ಶಹಜಾನ್ ಪುರದಲ್ಲಿರುವ ತಮ್ಮ ಆಶ್ರಮದಲ್ಲಿ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿ, ಸಾವಿರಾರು ಮಂದಿಗೆ ಪ್ರಸಾದ ವಿತರಿಸಿದ್ದರು.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 