ಪತ್ರಕರ್ತರ ರಾಜ್ಯ ಮಟ್ಟದ ದತ್ತಿನಿಧಿ ಪ್ರಶಸ್ತಿಗೆ ಚಿರಂಜೀವಿ ಆಯ್ಕೆ
Chiranjeevi selected for Journalist's State Level Endowment Fund Award
ಪತ್ರಕರ್ತರ ರಾಜ್ಯ ಮಟ್ಟದ ದತ್ತಿನಿಧಿ ಪ್ರಶಸ್ತಿಗೆ ಚಿರಂಜೀವಿ ಆಯ್ಕೆ
ರಾಣೇಬೆನ್ನೂರ 1 : ಮಾ 1ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ರಾಜ್ಯ ಮಟ್ಟದ ಈ ವರ್ಷದ ಮೂಡಣ ದತ್ತಿನಿಧಿಯ ಪ್ರಥಮ ಪ್ರಶಸ್ತಿಗೆ ಸ್ಥಳೀಯ ಹಿರಿಯ ಪತ್ರಕರ್ತ ಎಂ. ಚಿರಂಜೀವಿ ಅವರು ಆಯ್ಕೆಯಾಗಿದ್ದಾರೆ. ಪತ್ರಿಕಾರಂಗದಲ್ಲಿನ ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ಈ ದತ್ತಿನಿಧಿ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದೆ. ರಾಜ್ಯ, ಜಿಲ್ಲಾ ಹಾಗೂ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರರಾಗಿ ಸುಮಾರು 36 ವರ್ಷಗಳಿಗೂ ಅಧಿಕ ಕಾಲ ಚಿರಂಜೀವಿಯವರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ, ಜಿಲ್ಲಾ ಸಂಘದ ಸಮಿತಿಯ ಸದಸ್ಯರಾಗಿ ಹಾಗೂ ರಾಣೆಬೆನ್ನೂರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಚಿರಂಜೀವಿಯವರು ಸೇವೆ ಸಲ್ಲಿಸಿದ್ದಾರೆ. ಮಾರ್ಚ್ 9 ರಂದು ಕೊಪ್ಪಳದಲ್ಲಿ ನಡೆಯಲಿರುವ ಪ್ರಶಸ್ತಿ ಸಮಾರಂಭದಲ್ಲಿ ಚಿರಂಜೀವಿಯವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 