ಕ್ರಿಸ್ಮಸ್ ಆಚರಣೆ: ಯುವಕ ಸಮುದ್ರದಲ್ಲಿ ಮುಳುಗಿ ಸಾವು
ಪುದುಚೆರಿ, ಡಿ 26, ಬಂಗಾಳಕೊಲ್ಲಿಯಲ್ಲಿ ಕಾಲೇಜು ವಿದ್ಯಾರ್ಥಿ
ಮುಳುಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತನನ್ನು ತಮಿಳುನಾಡಿನ
ಮಧುರೈ ಕಾಲೇಜಿನಲ್ಲಿ ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಶ್ಯಾಮ್ (20) ಮಧುರೈ ಎಂದು ಗುರುತಿಸಲಾಗಿದೆ,.
ಕ್ರಿಸ್ಮಸ್ ಹಬ್ಬವನ್ನು ಆಚರಿಸಲು ಆತನ ಸ್ನೇಹಿತರಾದ ಸುಬಾಶ್ ಮತ್ತು ಯೋಗೇಶ್ ಅವರೊಂದಿಗೆ ಪುದುಚೇರಿಗೆ
ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿವಿಧಪ್ರದೇಶಗಳಿಗೆ ಭೇಟಿ ನೀಡಿದ ಸ್ನೇಹಿತರು ನಂತರ
ಚಿನ್ನವೀರಂಪಟಿನಂ ಬೀಚ್ ತಲುಪಿ ಸಮುದ್ರ ಸ್ನಾನಕ್ಕೆ ಮುಂದಾದರು. ಈ ವೇಳೆ ದೊಡ್ಡ ಅಲೆಯೊಂದು ಅವರನ್ನು ಸಮುದ್ರಕ್ಕೆ ಎಳೆದೊಯ್ದಿತು.
ಭದ್ರತಾ ಸಿಬ್ಬಂದಿ ಸಮುದ್ರಕ್ಕೆ ಹಾರಿ ಮೂವರನ್ನು ದಡಕ್ಕೆ ಕರೆತಂದರು. ಪ್ರಜ್ಞಾಹೀನರಾಗಿದ್ದ ಯುವಕರನ್ನು
ಇಲ್ಲಿನ ಸರ್ಕಾರಿ ಜನರಲ್ ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿ ವೈದ್ಯರು ಶ್ಯಾಮ್ ಮೃತಪಟ್ಟಿರುವುದಾಗಿ
ಘೋಷಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆತನ ಪೋಷಕರಿಗೆ ಮಾಹಿತಿ ನೀಡಲಾಗಿದೆ
ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 